ಅಂಗನವಾಡಿಯಿಂದ ಬರುತ್ತಿದ್ದ ಬಾಲಕಿ ಮೇಲೆ ಹರಿದ ಟಿಪ್ಪರ್; ಬಾಲಕಿ ಮೃತ್ಯು
ದಾವಣಗೆರೆ;ಅಂಗನವಾಡಿ ಮುಗಿಸಿ ತನ್ನ ಅಜ್ಜಿಯ ಕೈ ಹಿಡಿದುಕೊಂಡು ರಸ್ತೆ ಮೇಲೆ ನಡೆದುಕೊಂಡು ಬರುತ್ತಿದ್ದ ಬಾಲಕಿ ಮೇಲೆ ಟಿಪ್ಪರ್ ಲಾರಿ ಹರಿದು ಮೃತಪಟ್ಟ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ. ಚರಸ್ವಿ(3) ಮೃತ ಬಾಲಕಿ. ಈಕೆ ಕುಂದುವಾಡ ಗ್ರಾಮದ ಗಣೇಶ್ ಎಂಬುವವರ ಪುತ್ರಿಯಾಗಿದ್ದಾಳೆ. ಬಾಲಕಿ ಅಂಗನವಾಡಿ ಮುಗಿಸಿ ಮನೆಗೆ ಅಜ್ಜಿ ಜತೆ ಹೊರಟಿದ್ದಳು.ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿಯು ಬಾಲಕಿಗೆ ಢಿಕ್ಕಿಯಾಗಿ ಬಾಲಕಿಯ ತಲೆ ಮೇಲೆ ಹರಿದಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲಾರಿ ಚಾಲಕನ … Read more