ವಿಟ್ಲ;ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ

ವಿಟ್ಲ;ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.ಗಣೇಶ್ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತ್ರಿಶೂರ್ ನಲ್ಲಿ ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದವ ಮಂಗಳೂರಿನಲ್ಲಿ ಅರೆಸ್ಟ್; ಈತ ಸಿಕ್ಕಿ ಬಿದ್ದಿದ್ದೇಗೆ ಗೊತ್ತಾ?

-ಅಹಮ್ಮದ್ ಅಕ್ಮಲ್ ಬಂಧಿತ ಆರೋಪಿ ಮಂಗಳೂರು;ತ್ರಿಶೂರ್ ನಲ್ಲಿ ತನ್ನ ಅಜ್ಜ-ಅಜ್ಜಿಯ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಅಹಮ್ಮದ್ ಅಕ್ಮಲ್ (27)ಬಂಧಿತ ಆರೋಪಿ.ಈತ ನಗರದಲ್ಲಿ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಮಾಹಿತಿ ಪಡೆದ ಪೊಲೀಸರ ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ತ್ರಿಶೂರ್ ಜಿಲ್ಲೆಯ ವೈಲತ್ತೂರು ನಿವಾಸಿ ಅಹಮ್ಮದ್, ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23 ರಂದು ರಾತ್ರಿ ತನ್ನ ಅಜ್ಜ ಮತ್ತು ಅಜ್ಜಿಯನ್ನು ಕೊಲೆ ಮಾಡಿ ಅವರ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ.ಆತನ ವಿಚಾರಣೆ ನಡೆಸಿದಾಗ ಆತ … Read more

ಭಾರೀ ಮಳೆ ಹಿನ್ನೆಲೆ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ(ಜು.26) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ಜು.26ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜು.26ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ರಜೆ ನೀಡಿ … Read more

ಸಿಂಗಾಪುರದಲ್ಲಿ ಸರಕಾರ ಉರುಳಿಸಲು ತಂತ್ರ ಕುರಿತ ಡಿಸಿಎಂ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಾವೇರಿ:ಸರಕಾರ ಉರುಳಿಸಲು ಸಿಂಗಾಪುರದಲ್ಲಿ ಪ್ರಯತ್ನ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ,ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ.ಈ ಬಗ್ಗೆ ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ ಮಾತನಾಡಿದ ಸಿಎಂ, ಈ ಮೂಢ ನಂಬಿಕೆ ಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ … Read more

ಅಬುಧಾಬಿ;ಯುವಕನೋರ್ವನಲ್ಲಿ ಹೊಸ MERS ವೈರಸ್ ಪತ್ತೆ;ಏನಿದು ಮಾರಣಾಂತಿಕ ವೈರಸ್?

ಯುಎಇ; ಯುನೈಟೆಡ್ ಅರಬ್ ಎಮಿರೇಟ್ಸ್ ಅಬುಧಾಬಿಯ ಅಲ್ ಐನ್ ನಗರದ 28 ವರ್ಷದ ವ್ಯಕ್ತಿಗೆ ಮೆರ್ಸ್-ಸಿಒವಿ ಪಾಸಿಟಿವ್ ಬಂದಿದ್ದು, ಅವರನ್ನು ಕಳೆದ ತಿಂಗಳು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲಾ 108 ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ಅವರಲ್ಲಿ ಯಾರಲ್ಲೂ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎನ್ನಲಾಗಿದೆ. ರೋಗಿಯನ್ನು ಜೂನ್ 8 ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್ 21 ರಂದು ನಾಸೊಫಾರಿಂಜಿಯಲ್ ಸ್ವ್ಯಾಬ್ ನ್ನು ಸಂಗ್ರಹಿಸಲಾಯಿತು ಮತ್ತು ಜೂನ್ 23 ರಂದು ಪಾಲಿಮರೇಸ್ ಚೈನ್ … Read more

ವಿಟ್ಲ:ಕಾರು & ಟಿಪ್ಪರ್ ನಡುವೆ ಭೀಕರ ಅಪಘಾತ; ನಾಲ್ವರಿಗೆ ಗಾಯ

ವಿಟ್ಲ:ಕಾರು & ಟಿಪ್ಪರ್ ನಡುವೆ ಭೀಕರ ಅಪಘಾತ; ನಾಲ್ವರಿಗೆ ಗಾಯ ವಿಟ್ಲ:ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಗಾಯಗೊಂಡಿದ್ದು,ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

ಭಾರೀ ಮಳೆಗೆ ಮನೆಗೋಡೆ ಕುಸಿತ; ಬಾಲಕಿ ದುರ್ಮರಣ

ಭಾರೀ ಮಳೆಗೆ ಮನೆಗೋಡೆ ಕುಸಿತ; ಬಾಲಕಿ ದುರ್ಮರಣ ದಾವಣಗೆರೆ:ಭಾರೀ ಮಳೆಗೆ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಕೆಂಚಪ್ಪ ಹಾಗೂ ಲಕ್ಷ್ಮಿದೇವಿ ಅವರ ಪುತ್ರಿ ಸ್ಪೂರ್ತಿ ಎಂದು ಗುರುತಿಸಲಾಗಿದೆ.ಮನೆಗೋಡೆ ಕುಸಿತದ ವೇಳೆ ಸ್ಫೂರ್ತಿ ತಂದೆ ಕೆಂಚಪ್ಪಗೆ ಗಾಯವಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಸಂಪೂರ್ಣವಾಗಿ ಹಾನಿಯಾಗಿದ್ದು, ರಾತ್ರಿ ವೇಳೆ ಮನೆಯವರು ಮಲಗಿದ್ದ … Read more

ಗಾಯಗೊಂಡು ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ

ಗಾಯಗೊಂಡು ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಉತ್ತರಪ್ರದೇಶ;ಗಾಯಗೊಂಡು ನೆಲದ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಆದಿತ್ಯ ಎಂದು ಗುರುತಿಸಲಾದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ 30 ಸೆಕೆಂಡುಗಳ ವೀಡಿಯೊದಲ್ಲಿ, ಆರೋಪಿಯು ನೆಲದ … Read more

ಶಂಕಿತ ಜುನೈದ್ ಪತ್ತೆಗೆ ಲುಕ್ ಔಟ್ ನೊಟೀಸ್ ಜಾರಿ

ಬೆಂಗಳೂರು;ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ ಈಗಾಗಲೇ ಬಂಧಿಸಿದ್ದಾರೆ. ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಆರೋಪಿ -2 ಜುನೈದ್ ಪತ್ತೆಯಾಗಿ ಸಿಸಿಬಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಜುನೈದ್ ದುಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ವಿಧ್ವಂಸಕ ಕೃತ್ಯಕ್ಕೆ ಸಂಚು … Read more

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್? ಕೆಲವೇ ದಿನಗಳಲ್ಲಿ ನಡೆಯಲಿದೆಯಾ ಹೈಡ್ರಾಮ? ಕಾಂಗ್ರೆಸ್ ನಾಯಕ ಹೇಳಿದ್ದೇನು ಗೊತ್ತಾ?

ಮಹಾರಾಷ್ಟ್ರ;ಆಗಸ್ಟ್‌ 10ರ ಸುಮಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವ ಶಿವಸೇನೆಯ ಏಕನಾಥ ಶಿಂದೆ ಅವರ ಬದಲಿಗೆ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಅವರು ಮುಖ್ಯಮಂತ್ರಿಯಾಗಬಹುದು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪೃಥ್ವಿರಾಜ್‌ ಚವಾಣ್‌ ಭವಿಷ್ಯ ನುಡಿದಿದ್ದಾರೆ. ಸಿಎಂ ಶಿಂದೆ ಮತ್ತು ಶಿವಸೇನೆಯ ಇತರ 15 ಶಾಸಕರ ಅನರ್ಹತೆ ಬಗ್ಗೆ ಆಗಸ್ಟ್‌ 10ರ ಸುಮಾರಿಗೆ ನಿರ್ಧಾರವಾಗಲಿದೆ ನಂತರ ಹಾಲಿ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಮುಖ್ಯಮಂತ್ರಿಯಾಗಿ ನೇಮಕವಾಗಬಹುದು ಎಂದು ಪೃಥ್ವಿರಾಜ್‌ ಚವಾಣ್‌ ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. ಶಿಂದೆ ತನ್ನ ತವರು … Read more