ಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ; ಭಯಾನಕ ಘಟನೆ ವರದಿ

ಒಂದೇ ಕುಟುಂಬದ ನಾಲ್ವರನ್ನು ಮೂವರು ದುಷ್ಕರ್ಮಿಗಳು ಇರಿದು ಕೊಲೆ ಮಾಡಿರುವ ಘಟನೆ ತಿರುಪ್ಪುರ ಜಿಲ್ಲೆಯ ಪಲ್ಲದಂ ಬಳಿ ನಡೆದಿದೆ. ಕೊಲೆಗೀಡಾದವರನ್ನು ಸೆಂಥಿಲ್ ಕುಮಾರ್, ಆತನ ತಾಯಿ ಪುಷ್ಪವತಿ,ಸೋದರ ಸಂಬಂಧಿ ಮೋಹನ್ ಹಾಗೂ ಮತ್ತೊಬ್ಬ ಸಂಬಂಧಿಕ ರತಿನಾಂಬೆಲ್ ಎಂದು ಗುರುತಿಸಲಾಗಿದೆ. ಎಲ್ಲರನ್ನು ಕೂಡ ಇರಿದು ಕೊಲೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ವಶಕ್ಕೆ ಪಡೆಯಲಾಗಿದೆ. ಎಲ್ಲಾ ಕೊಲೆಗಾರರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಸುದ್ದಿ ತಿಳಿಯುತ್ತಲೇ … Read more

ಮಂಗಳೂರು; ಯುವಕನಿಗೆ ಚೂರಿ ಇರಿತ ಪ್ರಕರಣ, ಮೂವರು ಪೊಲೀಸ್ ವಶಕ್ಕೆ

ಮಂಗಳೂರು:ಕಳವಾರು ಬಳಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಶಾಂತ್‌ ಯಾನೆ ಪಚ್ಚು(28),ಧನರಾಜ್(23) ಮತ್ತು ಯಜ್ಞೇಶ್‌(22) ಬಂಧಿತರು.ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅಬ್ದುಲ್‌ ಸಫ್ವಾನ್‌ ತನ್ನ ಸ್ನೇಹಿತ ಮುಹಮ್ಮದ್‌ ಸಫ್ವಾನ್‌ ಎಂಬಾತನೊಂದಿಗೆ ಸಂಜೆ 7:30ರ ಸುಮಾರಿಗೆ ಕಳವಾರು ಗೆಳೆಯರ ಬಳಗ ಬಸ್ಸು ನಿಲ್ದಾಣದ ಬಳಿ ಬೈಕಿನಲ್ಲಿ ತೆರಳುತ್ತಿದ್ದಾಗ ಎದರುಗಡೆಯಿಂದ ಆರೋಪಿಗಳಾದ ಪ್ರಶಾಂತ್ ಮತ್ತು ಧನರಾಜ್ ಎಂಬವರು ತಮ್ಮ ಬೈಕ್ ನಿಂದ ಅಡ್ಡಗಟ್ಟಿ ನಿಲ್ಲಿಸಿ ಅವಾಚ್ಯ … Read more

ಬೆಳ್ತಂಗಡಿ; ಕಾರು & ಬೈಕ್ ನಡುವೆ ಅಪಘಾತ, ಸವಾರ ಮೃತ್ಯು

ಬೆಳ್ತಂಗಡಿ:ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಮೃತರು ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣ ಬೈಕ್‌ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು … Read more

ಬ್ಯಾಂಕ್ ದರೋಡೆಗೆ ಯತ್ನಿಸಿ “ಒಳ್ಳೆಯ ಬ್ಯಾಂಕ್, ನನ್ನನ್ನು ಹಿಡಿಯಬೇಡಿ” ಎಂದು ನೋಟ್ ಬರೆದಿಟ್ಟು ಹೋದ ಕಳ್ಳ

ಬ್ಯಾಂಕ್ ದರೋಡೆಗೆ ಯತ್ನಿಸಿ “ಒಳ್ಳೆಯ ಬ್ಯಾಂಕ್, ನನ್ನನ್ನು ಹಿಡಿಯಬೇಡಿ” ಎಂದು ನೋಟ್ ಬರೆದಿಟ್ಟು ಹೋದ ಕಳ್ಳ ತೆಲಂಗಾಣ; ದರೋಡೆಗೆ ಯತ್ನಿಸಿದ್ದ ಕಳ್ಳ ದರೋಡೆ ವಿಫಲವಾದ ಹಿನ್ನಲೆಯಲ್ಲಿ ‘ಒಳ್ಳೆಯ ಬ್ಯಾಂಕ್, ನನ್ನನ್ನು ಹಿಡಿಯಬೇಡಿ’ಎಂದು ನೋಟ್ ಬರೆದಿಟ್ಟು ಪರಾರಿಯಾಗಿದ್ದಾನೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮುಸುಕುಧಾರಿ ಕಳ್ಳರು ಗುರುವಾರ ನೆನ್ನೆಲ್ ಮಂಡಲ್ ಪ್ರಧಾನ ಕಚೇರಿಯಲ್ಲಿರುವ ಸರ್ಕಾರಿ ಗ್ರಾಮೀಣ ಬ್ಯಾಂಕ್ ಶಾಖೆಯ ಮುಖ್ಯ ಬಾಗಿಲಿನ ಬೀಗವನ್ನು ಮುರಿದು ಪ್ರವೇಶಿಸಿದ್ದಾರೆ. ಈ ವೇಳೆ ಬ್ಯಾಂಕ್ ಶಾಖೆಯ ಲಾಕರ್ಗಳನ್ನು ತೆರೆಯಲು ಕಳ್ಳರು … Read more

ಜೈಶ್ರೀರಾಂ ಘೋಷಣೆ ಕೂಗಿ ಮಝರ್ ಗಳ ಧ್ವಂಸ

ಜೈಶ್ರೀರಾಂ ಘೋಷಣೆ ಕೂಗಿ ಮಝರ್ ಗಳ ಧ್ವಂಸ ಉತ್ತರಾಖಂಡ; ಋಷಿಕೇಶದ ಅಮಿತ ಗ್ರಾಮ ಪ್ರದೇಶದಲ್ಲಿ ಎರಡು ಮಝರ್‌ಗಳನ್ನು ಸುತ್ತಿಗೆಗಳು ಮತ್ತು ಜೆಸಿಬಿಗಳನ್ನು ಬಳಸಿ ಧ್ವಂಸಗೊಳಿಸಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೈಶ್ರೀರಾಂ ಘೋಷಣೆಗಳನ್ನು ಕೂಗುತ್ತಾ ಇಬ್ಬರು ಯುವಕರು ಸುತ್ತಿಗೆಗಳನ್ನು ಬಳಸಿ ಮಝರ್‌ನ್ನು ಧ್ವಂಸ ಮಾಡಿದ್ದಾರೆ. ಬಳಿಕ ಧ್ವಂಸಮಾಡಿದ ಮಝರ್‌ನ ಅವಶೇಷಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವುದು ಕಂಡು ಬಂದಿದೆ. ಇದೇ ವೇಳೆ ಅಕ್ರಮ ಮಝರ್‌ಗಳು ಎಲ್ಲಿದೆಯೋ ಅಲ್ಲೆಲ್ಲ ಧ್ವಂಸ ಮಾಡುತ್ತೇವೆ. ಇದು ದೇವಭೂಮಿ, ಮಝರ್ ಭೂಮಿ … Read more

ಬಜ್ಪೆ; ಯುವಕನಿಗೆ ಚೂರಿ ಇರಿತ

ಮಂಗಳೂರು:ಆಟವಾಡಿ ಮನೆಗೆ ಹಿಂತಿರುಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ. ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌(23) ಗಾಯಗೊಂಡಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇರಿತದ ಪರಿಣಾಮ ಸಫ್ವಾನ್ ಅವರ ಕೈಗೆ, ಕುತ್ತಿಗೆಗೆ ಗಾಯಗಳಾಗಿವೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.