ದಾವಣೆಗೆರೆ;ಜಾತ್ರಾ ಕಾರ್ಯಕ್ರಮವೊಂದಕ್ಕೆ ಸುದೀಪ್ ಬರುತ್ತಾರೆಂದು ಕಾದು ಕೊನೆಗೆ ಅಭಿಮಾನಿಗಳು ಅಲ್ಲಿದ್ದ ಖುರ್ಚಿಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವಿಚಾರ ಬಗ್ಗೆ ನಟ ಕಿಚ್ಚ ಸುದೀಪ್, ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದು ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ.
ಸ್ನೇಹಿತರಿಗೆ ನಲ್ಮೆಯ ನಮಸ್ಕಾರ.ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ.ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ..ಮುಂದೆ ಖಂಡಿತ ಬರುವೆ.ಪ್ರೀತಿ ಇರಲಿ.ಶಾಂತ ರೀತಿಯಿಂದ ವರ್ತಿಸಿ, ಪ್ರೀತಿಯೊಂದಿಗೆ ನಿಮ್ಮ ಕಿಚ್ಚ ಎಂದು ಟ್ವೀಟ್ ಮೂಲಕ ಸ್ಪಷ್ಟ ಸಂದೇಶ ನೀಡಿದ್ದಾರೆ.
ದಾವಣಗೆರೆ ಜಿಲ್ಲೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ನಿನ್ನೆ ಸಂಜೆ ನಟ ಸುದೀಪ್ ಕಾರ್ಯಕ್ರಮ ನಿಗದಿಯಾಗಿತ್ತೆಂದು ಹೇಳಲಾಗಿದೆ.ಇದರಿಂದ ಅಭಿಮಾನಿಗಳು ಸೇರಿದ್ದರು. ಜನ ಸೇರಿದ ಬಳಿಕ ಕಾರ್ಯಕ್ರಮ ಆಯೋಜಕರು ಸುದೀಪ್ ಬರುವುದಿಲ್ಲ ಎಂದು ಹೇಳಿದ್ದಾರೆ.ಇದರಿಂದ ಅಭಿಮಾನಿಗಳು ಆಕ್ರೋಶಗೊಂಡಿದ್ದರು.ಬಳಿಕ ಲಘು ಲಾಠಿ ಚಾರ್ಜ್ ಮಾಡಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.