ಬೆಂಗಳೂರು; ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಏಪ್ರಿಲ್ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು.
ಇತ್ತೀಚಿಗೆ `ಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾದಲ್ಲಿ ಸಂಪತ್ ಗಮನ ಸೆಳೆದಿದ್ದರು. ಆದರೆ ಚಿತ್ರರಂಗದಲ್ಲಿ ಸೂಕ್ತ ಅವಕಾಶ ಸಿಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ನಟ ಸಂಪತ್ ಅವರು ಇತ್ತೀಚಿಗೆಷ್ಟೇ ಮದುವೆಯಾಗಿದ್ದರು. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ನಟ ಇದೀಗ ಇಹಲೋಕ ತ್ಯಜಿಸಿರುವುದು ಚಿತ್ರರಂಗದ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ.