ಅಲಿಗಢ್ ಮಸೀದಿಗೆ ಟಾರ್ಪಾಲಿನ್ ನಿಂದ ಮುಚ್ಚಲು ಸ್ಥಳೀಯ ಆಡಳಿತದಿಂದ ಸೂಚನೆ

ಅಲಿಗಢ: ಅಲಿಗಢಲ್ಲಿರುವ ಮಸೀದಿಯೊಂದಕ್ಕೆ ಹೋಳಿ ಹಬ್ಬದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಟಾರ್ಪಾಲಿನ್‌ ಹೊದಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.

ಪೊಲೀಸ್ ಇಲಾಖೆಯ ಸೂಚನೆಯ ಮೇರೆಗೆ, ಹೋಳಿ ಹಬ್ಬದ ಹಿನ್ನೆಲೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಅಲಿಗಢದ ಅತ್ಯಂತ ಸೂಕ್ಷ್ಮ ಹಲ್ವಾಯಿಯಾ ಕ್ರಾಸ್‌ರೋಡ್‌ನಲ್ಲಿರುವ ಅಬ್ದುಲ್ ಕರೀಮ್ ಮಸೀದಿಯನ್ನು ಟಾರ್ಪಾಲಿನ್​ನಿಂದ ಮುಚ್ಚಲಾಗಿದೆ.

ಕಳೆದ 7 ವರ್ಷಗಳಿಂದ ಹೋಳಿ ಹಬ್ಬದಲ್ಲಿ ರಾತ್ರಿಯ ಸಮಯದಲ್ಲಿ ಈ ಮಸೀದಿಯನ್ನು ಇದೇ ರೀತಿ ಟಾರ್ಪಾಲಿನ್​ನಿಂದ ಮುಚ್ಚಲಾಗುತ್ತಿದೆ.

ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಸ್ಥಳೀಯ ಆಡಳಿತದ ಸೂಚನೆ ಮೇರೆಗೆ ಮಸೀದಿಗೆ ಯಾರೂ ಬಣ್ಣ ಅಥವಾ ಮಣ್ಣು ಎಸೆಯದಂತೆ ಟಾರ್ಪಾಲಿನ್‌ನಿಂದ ಮುಚ್ಚಿದ್ದೇವೆ ಎಂದು ಹೇಳಿದ್ದಾರೆ.

ಮಸೀದಿಗೆ ಯಾರೂ ಬಣ್ಣ ಅಥವಾ ಕೊಳಕು ಎರಚದಂತೆ ರಕ್ಷಿಸಲು ನಾವು ಮಸೀದಿಯನ್ನು ಮುಚ್ಚುತ್ತೇವೆ ಎಂದು ನಿವಾಸಿ ಅಖೀಲ್ ಪಹಲ್ವಾನ್ ಹೇಳಿದರು.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com