ನಡೆದುಕೊಂಡು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಆಂಬ್ಯುಲೆನ್ಸ್ ಢಿಕ್ಕಿ; ಇಬ್ಬರು ಮೃತ್ಯು

ಬೆಂಗಳೂರು;ನಡೆದುಕೊಂಡ ಹೋಗುತ್ತಿದ್ದ ಇಬ್ಬರಿಗೆ ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ
ನಾಗೇಂದ್ರ ಮೃತ ದುದೈರ್ವಿಗಳು.ಇಬ್ಬರು ಕಾಫಿ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದು ಹೊಟೇಲ್​ವೊಂದರಲ್ಲಿ ಹಮ್ಮಿಕೊಂಡಿದ್ದ ತರಬೇತಿಗಾಗಿ ಬಂದಿದ್ದರು.ಅಲ್ಲಿಂದ ಟೀ ಕುಡಿಯಲು ಬೆಳಗ್ಗೆ ಇಬ್ಬರು ನಡೆದುಕೊಂಡು ಹೋಗುವಾಗ ವೇಗವಾಗಿ ಬಂದ ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಪ್ರಕಾಶ್ ಸ್ಥಳದಲ್ಲಿ ಮೃತಪಟ್ಟರೆ, ನಾಗೇಂದ್ರ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ‌.

ಆಂಬುಲೆನ್ಸ್ ಚಾಲಕ ಪ್ರಸನ್ನ ಸ್ಥಳದಿಂದ ಪರಾರಿಯಾಗಿದ್ದು, ವಾಹನದಲ್ಲಿದ್ದ ಸಿಬ್ಬಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.‌

ಟಾಪ್ ನ್ಯೂಸ್