ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಚುನಾವಣೆ ಹಿನ್ನೆಲೆ ಕರ್ನಾಟಕಕ್ಕೆ ಸರಣಿ ಆಗಮನದ ಬಗ್ಗೆ ಕಾಂಗ್ರೆಸ್ ಬಿಜೆಪಿ ಮತ್ತು ಅಮಿತ್ ಶಾ ಅವರ ಕಾಲೆಳೆದಿದೆ.
ಅಮಿತ್ ಶಾ ರಾಜ್ಯಕ್ಕೆ ಬಂದಿರುವುದು ವಿಧಾನಸಭೆ ಚುನಾವಣೆಗೋ ಅಥವಾ ಶೇ 40ರಷ್ಟು ಕಲೆಕ್ಷನ್ಗೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾಂಗ್ರೆಸ್ ಸರಣಿ ಟ್ವೀಟ್ ನಲ್ಲಿ ಏನೇನಿದೆ ಓದಿ…
ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರವು ಲುಂಗಿ ಡಾನ್ಸ್ ಮಾಡ್ತಿದ್ದರೂ ಕೇಂದ್ರ ನಾಯಕರು ತುಟಿ ಬಿಚ್ಚುವುದಿಲ್ಲವೇಕೆ?
ಪ್ರಧಾನಿಗೆ ಪತ್ರಗಳ ಮೇಲೆ ಪತ್ರ ಬರೆದರೂ ಸಣ್ಣ ಸ್ಪಂದನೆಯೂ ಇಲ್ಲವೇಕೆ?ಬಿಜೆಪಿ ಹೈಕಮಾಂಡಿಗೆ ಕರ್ನಾಟಕ ಸಮೃದ್ಧವಾದ ಎಟಿಎಂ ಆಗಿದೆಯೇ?
@AmitShah ಬಂದಿರುವುದು ಎಲಕ್ಷನ್ನಿಗಾ? 40% ಕಲೆಕ್ಷನ್ನಿಗಾ?ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕರ್ನಾಟಕದ ನಂದಿನಿಯ ಮೇಲೆ ಕಣ್ಣು ಹಾಕಿದ @AmitShah ಅವರೇ,ನಿಮ್ಮದು
KMF ಉದ್ಯೋಗಗಳನ್ನು ಕನ್ನಡಿಗರಿಂದ ಕಿತ್ತು ಉತ್ತರ ಭಾರತೀಯರ ಕೈಗೆ ಕೊಡುವ ಹುನ್ನಾರವೇ?
ನಂದಿನಿ ಬ್ರಾಂಡ್ ಮುಳುಗಿಸಿ ಅಮುಲ್ನ್ನು ತಂದು ಸ್ಥಾಪಿಸುವ ಷಡ್ಯಂತ್ರವೇ?ಸ್ವಾಭಿಮಾನದ ನಂದಿನಿಯನ್ನು ಮುಳುಗಿಸಿ ರಾಜ್ಯದ ರೈತರನ್ನು ಗುಲಾಮಗಿರಿಗೆ ತಳ್ಳುವ ತಂತ್ರವೇ? ಎಂದು ಇನ್ನೊಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಂದ ಕನ್ನಡಿಗರ ಮೇಲೆ ನಿರಂತರ ಹಲ್ಲೆ, ದೌರ್ಜನ್ಯ ನಡೆಯುತ್ತಿದೆ.ದೇಶದ ಗೃಹಸಚಿವರಾಗಿ ಕನ್ನಡಿಗರಿಗೆ ರಕ್ಷಣೆ ನೀಡಲಾಗದ ತಮ್ಮಿಂದ ಕನ್ನಡಿಗರಿಗೆ ಸಿಗುವುದಾದರೂ ಏನು?
ಕರ್ನಾಟಕದ ಕಷ್ಟ ಕೇಳಲು ಬರದೆ, ಚುನಾವಣೆ ಪ್ರಚಾರಕ್ಕೆ ಬರುವ @AmitShah ಅವರ ದ್ರೋಹ ಕನ್ನಡಿಗರಿಗೆ ನೆನಪಿದೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ನಲ್ಲಿ ಹೇಳಿದೆ.