ಚುನಾವಣಾ ಪ್ರಚಾರ ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಗದರಿಸಿದ ಅಮಿತ್ ಶಾ, ವಿಡಿಯೋ ವೈರಲ್…

ಉಡುಪಿ; ಅಮಿತ್‌ ಶಾ ಅವರು ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಗದರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಕುರಿತು ಸುದ್ದಿ ಮಾದ್ಯಮವೊಂದರ ಸುದ್ದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಕಾಂಗ್ರೆಸ್, ಬಿಜೆಪಿಯಲ್ಲಿ ಮೊ-ಶಾ ಜೋಡಿಯ ಮುಂದೆ ಯಾರಿಗೂ ಸ್ವತಂತ್ರವಿಲ್ಲ. ‘ಶಾ’ಭಿಮಾನ ಇರಬೇಕೆ ಹೊರತು ಸ್ವಾಭಿಮಾನ ಇರಕೂಡದು’ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

‘ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಚಿಕ್ಕ ಮಕ್ಕಳನ್ನು ಗದರುವಂತೆ ಗದರಿದ ಅಮಿತ್ ಶಾ ಕನ್ನಡಿಗರನ್ನು, ಹಿಂದುಳಿದ ವರ್ಗವನ್ನು ನಿಷ್ಕೃಷ್ಠವಾಗಿ ಕಂಡಿದ್ದಾರೆ. ಬಿಜೆಪಿ ನಾಯಕರನ್ನು ಸೃಷ್ಟಿಸುವುದಿಲ್ಲ, ಅಮಿತ್ ಶಾ ಕಾಲಿನಡಿ ಕೂರುವ ಗುಲಾಮರನ್ನು ಸೃಷ್ಟಿಸುತ್ತದೆ ಎಂಬುದಕ್ಕೆ ಉದಾಹರಣೆ ಇದು’ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ‌.

ಬಿಜೆಪಿ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ವಿಫಲವಾಗಿದ್ದಾರೆಂದು ಶ್ರೀನಿವಾಸ್‌ ಪೂಜಾರಿಗೆ ಗದರಿಸಿದ್ದಾರೆ ಎಂದು ಕಾಂಗ್ರೆಸ್ ಇದೇ ವೇಳೆ ಬಿಜೆಪಿಗೆ ಕಾಲೆಳೆದಿದೆ.

ಅಮಿತ್ ಶಾ ಮಾತನಾಡುವಾಗ ಶ್ರೀನಿವಾಸ್ ಪೂಜಾರಿ ಏನೋ ಹೇಳಲು ಪ್ರಯತ್ನಿಸಿದ್ದಾರೆ.ಈ ವೇಳೆ ಕೋಪಗೊಂಡ ಅಮಿತ್ ಶಾ ಶ್ರೀನಿವಾಸ್ ಪೂಜಾರಿಗೆ ಗದರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com