ಕರ್ನಾಟಕದ ಬಳಿಕ ಮತ್ತೊಂದು ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ರದ್ದು ಪಡಿಸುವುದಾಗಿ ಹೇಳಿದ ಅಮಿತ್ ಶಾ; ಅಮಿತ್ ಶಾ ಹೇಳಿಕೆಯಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ…
ತೆಲಂಗಾಣ; ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಕರ್ನಾಟಕದ ಚುನಾವಣಾ ಪ್ರಚಾರದ ಬಳಿಕ ಹೈದರಾಬಾದ್ ಬಳಿಯ ಚೆವೆಲ್ಲಾದಲ್ಲಿ ವಿಜಯ ಸಂಕಲ್ಪ ಸಭೆ ಹೆಸರಿನ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಷಾ ಮಾತನಾಡುವಾಗ ಭಾನುವಾರ ಈ ಹೇಳಿಕೆ ನೀಡಿದರು.
ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಮರಿಗೆ ನಾಲ್ಕು ಪ್ರತಿಶತ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ರದ್ದುಗೊಳಿಸಿತು. ಅದನ್ನು ಒಕ್ಕಲಿಗ, ಲಿಂಗಾಯತ ಸಮುದಾಯಗಳ ಕೋಟಾವನ್ನು ಹೆಚ್ಚಿಸಲು ನೀಡಲಾಗಿದೆ ಎಂದು ಹೇಳಿದ್ದಾರೆ.
ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ಚುನಾವಣೆಯ ನಂತರ ಬಿಜೆಪಿ ನಾಯಕತ್ವವು ಈ ವರ್ಷಾಂತ್ಯದಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಯತ್ತ ಗಮನ ಹರಿಸುವ ನಿರೀಕ್ಷೆಯಿದೆ.
ನಾವು ತೆಲಂಗಾಣದಲ್ಲಿ ಅಸಂವಿಧಾನಿಕ ಮುಸ್ಲಿಂ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ, ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಹಕ್ಕನ್ನು ನೀಡುತ್ತೇವೆ” ಎಂದು ಷಾ ಹೇಳಿದರು, ಡಿಸೆಂಬರ್ನಲ್ಲಿ ನಡೆಯಲಿರುವ ಚುನಾವಣೆಯ ನಂತರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ವಹಿಸುತ್ತದೆ ಎಂದು ಹೇಳಿದರು.
ಹಿಂದುಳಿದವರು ಎಂದು ವರ್ಗೀಕರಿಸಲಾದ ಮುಸ್ಲಿಮರು ತೆಲಂಗಾಣದಲ್ಲಿ ಶೇಕಡಾ ನಾಲ್ಕು ಮೀಸಲಾತಿಯನ್ನು ಪಡೆಯುತ್ತಾರೆ.ಕೆ ಚಂದ್ರಶೇಖರ್ ರಾವ್ ಸರ್ಕಾರವು ಎಐಎಂಐಎಂ ಕಾರ್ಯಸೂಚಿಯನ್ನು ಅದರ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯ ಆಜ್ಞೆಯ ಮೇರೆಗೆ ಜಾರಿಗೊಳಿಸುತ್ತಿದೆ ಎಂದು ಶಾ ತಮ್ಮ ಭಾಷಣದಲ್ಲಿ ಪದೇ ಪದೇ ಹೇಳಿದ್ದಾರೆ.