ರಾಜಸ್ಥಾನ;ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಸಭೆಗೆ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜಸ್ಥಾನದಲ್ಲಿ ಬಿಜೆಪಿ 73 ಶಾಸಕರನ್ನು ಹೊಂದಿದೆ. ರಾಜಸ್ಥಾನದ 10 ರಾಜ್ಯಸಭಾ ಸ್ಥಾನಗಳ ಪೈಕಿ 4 ಸ್ಥಾನಗಳು ಬಿಜೆಪಿ ಪಾಲಾಗಿವೆ. ಬಿಜೆಪಿಯ ಇಬ್ಬರು ರಾಜ್ಯಸಭಾ ಸದಸ್ಯರ ಅವಧಿ ಮುಂದಿನ ವರ್ಷ ಮಾರ್ಚ್ ನಲ್ಲಿ ಕೊನೆಗೊಳ್ಳಲಿದೆ. ಈ ಖಾಲಿ ಸ್ಥಾನಗಳಲ್ಲಿ ಅಣ್ಣಾಮಲೈ ಬಿಜೆಪಿಯಿಂದ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಣ್ಣಾಮಲೈ ಅವರು ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದು, ಸೇವೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.ಬಳಿಕ ಬಿಜೆಪಿ ಅವರಿಗೆ ತಮಿಳುನಾಡು ಬಿಜೆಪಿಯ ಸಾರಥ್ಯ ನೀಡಿತ್ತು.
ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಸಹ ಉಸ್ತುವಾರಿಯಾಗಿ ಕೂಡ ಕೆಲಸ ಮಾಡಿದ್ದರು.