ಬೆಳ್ತಂಗಡಿ:ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಾಕಾರಿಯಾಗಿ ಸುಳ್ಳು ಹೇಳಿಕೆ ಕೊಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿಯ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕ ದೂರು ನೀಡಿದೆ.
ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಮೇ.22ರಂದು ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಶಾಸಕ ಪೂಂಜಾ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಮತ್ತು ಪುತ್ತೂರು ಠಾಣೆಯಲ್ಲಿ ಕೂಡ ದೂರು ನೀಡಲಾಗಿದೆ.
ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಹೇಳಿಕೆ ನೀಡಿದ್ದು, ಇದು ಸರಿಯಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರು ನೀಡುವ ವೇಳೆ ಶ್ರೀಮತಿ ನಮಿತ ಕೆ ಪೂಜಾರಿ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ಸೇರಿ ಹಲವರು ಉಪಸ್ಥಿತರಿದ್ದರು.