ಅರುಣ್ ಕುಮಾರ್ ಪುತ್ತಿಲ ವಿರುದ್ಧ ತಿರುಗಿ ಬಿದ್ದ ಕಲ್ಲಡ್ಕ ಭಟ್; ಪುತ್ತಿಲ ವಿರುದ್ಧ ವಾಗ್ದಾಳಿ ಮಾಡಿ ಅವರು ಹೇಳಿದ್ದೇನು ಗೊತ್ತಾ?

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿರುವ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ ಎಂದು ಪ್ರಶ್ನಿಸಿದ್ದಾರೆ.

ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ ಎಂದು ಹೇಳಿದ್ದಾರೆ.

ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆ.

ಪುತ್ತಿಲ ಬೆನ್ನ ಹಿಂದೆ ಓಡುವವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com