BIG BREAKING; ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವದಿಂದ ಅನರ್ಹ

ನವದೆಹಲಿ;ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ‘ಮೋದಿ ಉಪನಾಮ’ ಹೇಳಿಕೆಗಾಗಿ ಮಾರ್ಚ್ 23 ರಂದು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ಶಿಕ್ಷೆಗೊಳಗಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ. ಗಾಂಧಿಯವರಿಗೆ “ಮೋದಿ ಉಪನಾಮ” ಟೀಕೆಗಳಿಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುರುವಾರ ದೋಷಿ ಎಂದು ಸಾಬೀತಾಯಿತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತು ಮತ್ತು ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿದೆ. … Read more

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು;ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಳಂಬ ಖಂಡಿಸಿ ರಾಜಭವನ ಚಲೋ ನಡೆಸಲು ಮುಂದಾದ ಸಿದ್ದರಾಮಯ್ಯ, ಡಿಕೆಶಿ ಸೇರಿ ಕೈ ನಾಯಕರನ್ನು ಪೊಲೀಸರು ತಡೆದು ವಶಕ್ಕೆ ಪಡೆದುಕೊಂಡರು. ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಕಾಂಗ್ರೆಸ್‌ ನಾಯಕರು ತೆರಳಲು ಮುಂದಾದಾಗ ಅರ್ಧದಲ್ಲೇ ಪೊಲೀಸರು ನಾಯಕರನ್ನು ವಶಕ್ಕೆ ಪಡೆದುಕೊಂಡರು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಶೆಡ್ಯೂಲ್ 9ಕ್ಕೆ ಸೇರಿಸುವಂತೆ … Read more

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ;ಸುಳ್ಯದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಮೆಂಟೆಕೆಜೆ ನಿವಾಸಿ ತೇಜುಕುಮಾರ್ ಪುತ್ರ ಲೋಕೇಶ್(25) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್ ಚಿಕ್ಕಮಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು. ರೂಂ ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಲೋಕೇಶ್ ತಂದೆ – ತಾಯಿ ಸಹೋದರನಿಗೆ ಅಗಲಿದ್ದಾರೆ.ಘಟನೆಯಿಂದ ಲೋಕೇಶ್ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

4.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ಮಗುವಿನ ತಾಯಿಗೆ 1 ಲಕ್ಷ ಕೊಟ್ಟು ಉಳಿದ ಹಣವನ್ನು ಹಂಚಿಕೊಂಡ ದಲ್ಲಾಳಿಗಳು!

4.5 ಲಕ್ಷಕ್ಕೆ ನವಜಾತ ಶಿಶು ಮಾರಾಟ; ಮಗುವಿನ ತಾಯಿಗೆ 1 ಲಕ್ಷ ಕೊಟ್ಟು ಉಳಿದ ಹಣವನ್ನು ಹಂಚಿಕೊಂಡ ದಲ್ಲಾಳಿಗಳು! ಜಾರ್ಖಂಡ್‍;ಗಂಡು ಮಗುವನ್ನು ತಾಯಿ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಛತ್ರಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ್ದು,ಮಗುವಿನ ಮಾರಾಟದ ಬಗ್ಗೆ … Read more

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು ತಿರುವನಂತಪುರಂ:ಲೇಡಿಸ್‌ ಹಾಸ್ಟೆಲ್‌ ಬಳಿ ಆಟೋದಲ್ಲಿ ಬಂದು ಖಾಸಗಿ ಅಂಗ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಮೂನ್ನ ಮೂಡು ವಟಿಯೂರ್ಕಾವಿನ ವಯಲಿಕಾಡದ ಚಂದ್ರಿಕಾ ಭವನದ ನಿವಾಸಿ ರಾತ್ರಿ 11ರ ಸುಮಾರಿಗೆ ಕಾಟನ್‌ ಹಿಲ್‌ ಸ್ಕೂಲ್‌ ಬಳಿಯಿರುವ ಲೇಡಿಸ್‌ ಹಾಸ್ಟೆಲ್‌ ಮುಂದೆ ಆಟೋ ನಿಲ್ಲಿಸಿ ಚಾಲಕ ಖಾಸಗಿ ಅಂಗ ಪ್ರದರ್ಶನ ಮಾಡುವ ಮೂಲಕ … Read more

ಸಮುದ್ರದಲ್ಲಿ ಇದ್ದ ದರ್ಗಾ ರೀತಿಯ ಆಕೃತಿಯನ್ನು ಅಕ್ರಮ ಎಂದು ನೆಲಸಮ ಮಾಡಿದ ಪಾಲಿಕೆ ಅಧಿಕಾರಿಗಳು

ಸಮುದ್ರದಲ್ಲಿ ಇದ್ದ ದರ್ಗಾ ರೀತಿಯ ಆಕೃತಿಯನ್ನು ನೆಲಸಮ ಮಾಡಿದ ಪಾಲಿಕೆ ಅಧಿಕಾರಿಗಳು ಮುಂಬೈ;ಮಹೀಮ್‌ ಪ್ರದೇಶದ ಅರೇಬಿಯನ್ ಸಮುದ್ರದ ಬೀಚ್ ನಲ್ಲಿ ಅಕ್ರಮ ಎಂದು ದರ್ಗಾ ರೀತಿಯ ಆಕೃತಿಯನ್ನು ಬೃಹತ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ನೆಲಸಮಗೊಳಿಸಿದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಬುಧವಾರ ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಅಕ್ರಮವಾಗಿ ದರ್ಗಾ ನಿರ್ಮಿಸಲಾಗಿದೆ.ಮೊದಲು ಇರಲಿಲ್ಲ ಈಗ ಎಲ್ಲಿಂದ ಬಂದಿದೆ ಎಂದು ಪ್ರಶ್ನಿಸಿದ ಬೆನ್ನಲ್ಲೇ ದರ್ಗಾ ತೆರವು ನಡೆದಿದೆ. ಮಾಹಿಮ್ ದರ್ಗಾ … Read more

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ.ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್,ವಿವಾಹ ಸರ್ಟಿಫಿಕೇಟ್ ನೋಂದಣಿ ಮಾಡಲು ರಾಜ್ಯ ಸರ್ಕಾರ 2023 ಫೆಬ್ರವರಿ 21ರಂದು ವಕ್ಫ್ ಮಂಡಳಿಗೆ ಅನುಮತಿ ನೀಡಿದೆ.ಜಿಲ್ಲೆಯ ಮುಸ್ಲಿಮರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸಾರ್ವಜನಿಕರು ಮದುವೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸಿದರೆ ಅದರ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ವಕ್ಫ್ ಅಧಿಕಾರಿಗೆ ಸಲ್ಲಿಸಬೇಕು.ದಾಖಲೆಗಳನ್ನು … Read more

BMTC ಬಸ್ ನಲ್ಲೇ ಕಂಡೆಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ‌ ಟ್ವಿಸ್ಟ್, ಇದು ಆಕಸ್ಮಿಕವಲ್ಲ, ಪೊಲೀಸ್ ತನಿಖೆಯಲ್ಲಿ ಹಲವು ಅಂಶಗಳು ಬಹಿರಂಗ

ಬೆಂಗಳೂರು:ಬಿಎಂಟಿಸಿ ಬಸ್‌ನಲ್ಲಿ ಕಂಡೆಕ್ಟರ್ ಮುತ್ತಯ್ಯ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸ್ ತನಿಖೆಯಲ್ಲಿ ಮಹತ್ವದ ಅಂಶ ಬಯಲಾಗಿದೆ. ಬಸ್‌ನಲ್ಲಿ ತಾಂತ್ರಿಕ‌ ದೋಷದಿಂದ ಬೆಂಕಿ‌ ಕಾಣಿಸಿಕೊಂಡು ಸಜೀವ ದಹನವಾಗಿದ್ದಾರೆ ಎಂದು ಆರಂಭದಲ್ಲಿ ಹೇಳಲಾಗುತ್ತಿತ್ತು. ಆದರೆ ಬಸ್ ನಲ್ಲಿ ಇಂಜಿನ್ ದೋಷವಿರಲಿಲ್ಲ,ಇದೊಂದು ಹತ್ಯೆಯೂ ಅಲ್ಲ. ಬದಲಾಗಿ ಕಂಡೆಕ್ಟರ್ ಮುತ್ತಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಲಿಂಗಧೀರನಹಳ್ಳಿ ಡಿಪೋದ ಬಸ್‌ನಲ್ಲಿದ್ದ ಮುತ್ತಯ್ಯ ಘಟನೆ ದಿನ ಮಧ್ಯರಾತ್ರಿ ಒಂದು ಗಂಟೆಯವರೆಗೂ ಫೋನ್ ಸಂಭಾಷಣೆ ನಡೆಸಿದ್ದರು.ಆ ಬಳಿಕ ಚಾಲಕ ಪ್ರಕಾಶ್​ ಗೆ … Read more

ಉಪ್ಪಿನಂಗಡಿ; ಮಗಳ ಮದುವೆಗೆ ಚಿನ್ನ ಖರೀದಿಸಲು ಹೋಗುವಾಗ 10 ಲಕ್ಷ ರೂ.ದೋಚಿ ಪರಾರಿಯಾದ ಪ್ರಕರಣ, ಓರ್ವನ ಬಂಧನ

ಉಪ್ಪಿನಂಗಡಿ; ಮಗಳ ವಿವಾಹಕ್ಕೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಅವರಿಂದ 10 ಲಕ್ಷ ರೂ.ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ಮುಸ್ತಫಾ (41)ಎಂಬಾತನನ್ನು ಬಂಧಿಸಿದ್ದಾರೆ.ಆತನಿಂದ ಎರಡು 9 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣದ ಇನ್ನೋರ್ವ ಆರೋಪಿ ಒಂದು ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸೋಮವಾರ ಇಳಂತಿಲ ಗ್ರಾಮದ ಪೆದಮಲೆಯ ಸರಳೀಕಟ್ಟೆ ರಿಫಾಯಿನಗರ ರಸ್ತೆಯಲ್ಲಿ ಈ ಪ್ರಕರಣ ಸಂಭವಿಸಿದೆ. … Read more

BREAKING; ಮೆಜೆಸ್ಟಿಕ್ ಬಳಿ ಕಟ್ಟೆ ಬಳಿ ಕುಳಿತಿದ್ದ ಇಬ್ಬರಿಗೆ ಚೂರಿ ಇರಿತ, ಸ್ಥಿತಿ ಗಂಭೀರ

ಬೆಂಗಳೂರು;ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟ‌ನೆ ಮೆಜೆಸ್ಟಿಕ್​ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ನಡೆದಿದೆ. ದೇವಸ್ಥಾನದ ಬಳಿ ಇರುವ ಕಟ್ಟೆ ಮೇಲೆ ಇಬ್ಬರು ಸುಮ್ಮನೆ ಕುಳಿತಿದ್ದಾಗ ಮಾನಸಿಕ ಅಸ್ವಸ್ಥನಾಗಿರುವ ಗಣೇಶ ಎಂಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ.ಈ ವೇಳೆ ಬಿಡಿಸಲು ಬಂದ ವ್ಯಕ್ತಿ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಉಪ್ಪಾರಪೇಟೆ ಠಾಣಾ ಪೊಲೀಸರು ಮೂವರು ಗಾಯಾಳುಗಳನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ‌.ಮೂವರ ಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದೆ. … Read more

Developed by eAppsi.com