-ಇಮ್ರಾನ್ ಖಾನ್, ರಾಧಿಕಾ ಮತ್ತು ಪೂಜಾ ಮೃತರು.
ಚಿಕ್ಕಬಳ್ಳಾಪುರ;ಬೆಂಗಳೂರಿನ ಮೂವರು ವಿದ್ಯಾರ್ಥಿಗಳು
ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ.
ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು.
ಬೆಂಗಳೂರಿನ ಕಾಲೇಜೊಂದರಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದು ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಆರು ಜನರ ತಂಡ ಆಗಮಿಸಿತ್ತು.
ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನೊಂದಿಗೆ ಶೋಧಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.