ಬೆಂಗಳೂರು;ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಕಟ್ಟಿದ್ದ ಬ್ಯಾಂಡೇಜ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಬಂದಿಳಿದಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದಾಗ ಆತ ಚಿನ್ನ ಕಳ್ಳಸಾಗಾಣಿಕೆ ಮಾಡಿರುವುದು ಪೊಲೀಸರು ಕಂಡುಕೊಂಡಿದ್ದಾರೆ.
ಈ ಪ್ರಯಾಣಿಕ ತನ್ನ ಕಾಲಿಗೆ ಸುತ್ತಿಕೊಂಡಿದ್ದ ಬ್ಯಾಂಡೇಜ್ ನಲ್ಲಿ ಬರೋಬ್ಬರಿ 43 ಲಕ್ಷ ರೂಪಾಯಿ ಮೌಲ್ಯದ 700 ಗ್ರಾಂ ಚಿನ್ನವನ್ನು ಆಡಗಿಸಿಟ್ಟುಕೊಂಡಿದ್ದು, ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು;ಎನ್ಎಸ್ಜಿ ಕಮಾಂಡೋ ಅಪಘಾತದಲ್ಲಿ ಮೃತ್ಯು
ಚಿಕ್ಕಮಗಳೂರು;ರಾಷ್ಟ್ರೀಯ ಭದ್ರತಾ ಪಡೆಯ ಬ್ಲ್ಯಾಕ್ ಕ್ಯಾಟ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ದೀಪಕ್ (22) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಎನ್ಎಸ್ಜಿ ಕಮ್ಯಾಂಡೋ ದೀಪಕ್ ತರೀಕೆರೆ ತಾಲೂಕಿನ ತಣಿಗೇಬೈಲು ನಿವಾಸಿ ಆಗಿದ್ದರು. ಇತ್ತೀಚೆಗೆ ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋವಾಗಿ ನೇಮಕವಾಗಿದ್ದರು.
ಕಳೆದ 2020ರಲ್ಲಿ ಮದುವೆಯಾಗಿದ್ದ ದೀಪಕ್ ಮನೆಯಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಒಂದು ತಿಂಗಳ ರಜೆ ಮೂಲಕ ತವರೂರಿಗೆ ವಾಪಸ್ ಬಂದಿದ್ದರು. ಊರಿಗೆ ಬಂದು ಹೊಸ ಬೈಕ್ ಅನ್ನು ಖರೀದಿ ಮಾಡಿದ್ದರು. ಈಗ ರಜೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೆಲಸಕ್ಕೆ ಮರಳಿ ಹೋಗಬೇಕಿತ್ತು.ಆದರೆ ವಿಧಿಯಾಟವೇ ಬೇರೆಯಾಗಿದ್ದು, ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.