ಬೆಂಗಳೂರು; ದಂತ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ.
ಪ್ರಿಯಾಂನ್ಷಿ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ಉತ್ತರಪ್ರದೇಶ ಲಕ್ನೋ ಮೂಲದ ಪ್ರಿಯಾಂನ್ಷಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತವೈದ್ಯೆ ಯಾಗಿ ಕೆಲಸ ಮಾಡುತ್ತಿದ್ದರು.
ಅದೇ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಈಕೆಯ ಪ್ರಿಯಕರ ಈಕೆಯ ಬಗ್ಗೆ ಅಪಪ್ರಚಾರ ಮಾಡಿದ್ದಾನೆಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.ಇದಲ್ಲದೆ ಆಕೆ ಆತನ ಪ್ರೀತಿಗೆ ನಿರಾಕರಿಸಿದ್ದಳು. ಆದರೆ ಆತ ಇದೇ ವಿಚಾರ ಇಟ್ಟುಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.
ಈ ಕುರಿತು ಸಂಜಯ್ ನಗರದ ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.