ಪೊಲೀಸ್ ವಶಕ್ಕೆ ಪಡೆಯುವ ವೇಳೆ ಮಹಡಿಯಿಂದ ಬಿದ್ದು ಯುವಕ ಸಾವು; ಘಟನೆ ಬೆನ್ನಲ್ಲೇ ಬಂಧನಕ್ಕೆ ಬಂದ ಪೊಲೀಸರ ವಿರುದ್ಧ ಗಂಭೀರ ಆರೋಪ‌ ಮಾಡಿದ ಹುಸೇನ್ ಕುಟುಂಬಸ್ಥರು

-ಮೊಹಮ್ಮದ್​ ಹುಸೇನ್(31)ಮೃತ ಯುವಕ.

ಬೆಂಗಳೂರು:ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ಯುವಕನೋರ್ವ 4ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ ನಡೆದಿದೆ.

ಮೃತ ಯುವಕನಿಗೆ ಮೊಹಮ್ಮದ್​ ಹುಸೇನ್(31) ಎಂದು ಗುರುತಿಸಲಾಗಿದೆ.ಪ್ರಕರಣವೊಂದರ ಸಂಬಂಧ ಹುಸೇನ್ ಗೆ ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು.4ನೇ ಮಹಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದ ವೇಳೆ ಬೆತ್ತಲೆಯಾಗಿ ಬಿದ್ದು ಹುಸೇನ್ ಮೃತಪಟ್ಟಿದ್ದಾನೆ.

ವಶಕ್ಕೆ ಪಡೆಯಲು ಬಂದಿದ್ದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮೊಹಮ್ಮದ್​ ಹುಸೇನ್ ಕುಟುಂಬದವರು ಆರೋಪಿಸಿದ್ದಾರೆ.

ಮಹಮ್ಮದ್ ಹುಸೇನ್ ಪೊಲೀಸ್ ವಶದಲ್ಲೇ ಸಾವನ್ನಪ್ಪಿದ್ದಾನೆ ಎಂದು ಬೊಮ್ಮನಹಳ್ಳಿ ಪೊಲೀಸ್ ಸಿಬ್ಬಂದಿ ಮೇಲೆ ಆತನ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.ಪೊಲೀಸ್ ಸಿಬ್ಬಂದಿ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಕುಟುಂಬ ಆಗ್ರಹಿಸಿದೆ.

ಘಟನೆ ಬಳಿಕ ಸೇಂಟ್ಸ್ ಜಾನ್ಸ್ ಆಸ್ಪತ್ರೆಗೆ ಹುಸೇನ್​​ನನ್ನು ಪೊಲೀಸರು ಕರೆತಂದಿದ್ದರು.ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಮಾಡಲಾಗುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com