ಬೆಂಗಳೂರು; ಮಳೆಗೆ ಚಿನ್ನಾಭರಣದ ಅಂಗಡಿಗೆ ನೀರು ನುಗ್ಗಿ ಕೊಚ್ಚಿಕೊಂಡು ಹೋದ ಚಿನ್ನಾಭರಣ! ಎರಡೂವರೆ ಕೋಟಿ ನಷ್ಟ ಎಂದು ಕಣ್ಣೀರುಡುತ್ತಿರುವ ಅಂಗಡಿ ಮಾಲಕಿ

ಬೆಂಗಳೂರು;ನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಅವಾಂತರಗಳು ನಡೆದಿವೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಅಪಾರ ನಷ್ಟಕ್ಕೆ ಕಾರಣವಾಗಿದೆ.

ಚಿನ್ನಾಭರಣ ಮಳಿಗೆಗೆ ಮಳೆಯ ನೀರು ನುಗ್ಗಿ ಸುಮಾರು ಎರಡುವರೆ ಕೋಟಿ ರೂ.ನಷ್ಟವಾಗಿದೆ.

ಮಾಧ್ಯಮವೊಂದು ವರದಿ ಮಾಡಿದ್ದು, ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ನಿಹಾನ್ ಆಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು, ಈ ವೇಳೆ ಮಳಿಗೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.

ಮಳೆ ನೀರು ಮಳಿಗೆಗೆ ನುಗ್ಗಿದ ವೇಳೆ ಸಿಬ್ಬಂದಿಗಳು ಇದ್ದರಾದರೂ ಆಭರಣಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗದಂತೆ ತಡೆಯಲೆತ್ನಿಸಿದ್ದಾರೆ.

ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುತ್ತಿದ್ದಾರೆ.

ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಿನಲ್ಲಿಯೇ ನಿಂತಿವೆ. ಭಾರೀ ಅನಾಹುತವೇ ಸಂಭವಿಸಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com