ಬಂಟ್ವಾಳ:ಪತ್ನಿ ಹಾಗೂ ಮಾವನಿಗೆ ದುಷ್ಕರ್ಮಿಯೋರ್ವ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್ ನಲ್ಲಿ ನಡೆದಿದೆ.
ಜೂನ್ 15 ರಂದು ರಾತ್ರಿ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಆಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ಕಡೆಗೆ ತೆರಳುವಾಗ ದಿವ್ಯಳ ಪತಿ ಕುಮಾರ ಆಟೋವನ್ನು ತುಂಬೆ ಜಂಕ್ಷನ್ ನಲ್ಲಿ ತಡೆದು ಚೂರಿಯಿಂದ ಪತ್ನಿಗೆ ಇರಿಯಲು ಯತ್ನಿಸಿದ್ದಾನೆ.ಈ ವೇಳೆ ಮಾವ ಬಿಡಿಸಲು ಹೋಗಿದ್ದು, ಮೂವರ ನಡುವೆ ತಳ್ಳಾಟ ನಡೆದಿದೆ.
ಘಟನೆಯಲ್ಲಿ ಗಾಯಗೊಂಡು ರಾಜೀವ ಹಾಗೂ ದಿವ್ಯ ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಕೌಟುಂಬಿಕ ಮನಸ್ಥಾಪದಿಂದ ಘಟನೆ ನಡೆದಿದೆ.
ಘಟನೆಯ ಕುರಿತು ಆಟೋ ಚಾಲಕ ಯಶೋಧರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.