ಬಂಟ್ವಾಳ:ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.
ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ.ಪ್ರವೀಣ್ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಣೆ ಮಾಡುತ್ತಿದ್ದರು.ಇವರು ಬಿಜೆಪಿಯ ಶಕ್ರಿಯ ಕಾರ್ಯಕರ್ತನಾಗಿದ್ದರು ಎನ್ನಲಾಗಿದೆ.
ಪ್ರವೀಣ್ ಇಂದು ಚುನಾವಣಾ ಪ್ರಚಾರದ ವೇಳೆ ತಲೆ ತಿರುಗಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರವೀಣ್ ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು,ಕೃಷಿಕನಾಗಿಯೂ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.