ಬೆಳ್ತಂಗಡಿ; ಶಾಲಾ ಬಾಲಕಿ ಆಸಿಫಾ ಅಸಹಜ ಸಾವು

ಬೆಳ್ತಂಗಡಿ;ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಿನ್ನೆ ಗೇರುಕಟ್ಟೆಯಲ್ಲಿ ಸಂಭವಿಸಿದೆ.

ಕುಪ್ಪೆಟ್ಟಿ ನಿವಾಸಿ ಅಬ್ದುರ್ರಝಾಕ್ ಎಂಬವರ ಪುತ್ರಿ ಆಸಿಫಾ(16) ಮೃತಪಟ್ಟ ಬಾಲಕಿ.ಈಕೆ ಗೇರುಕಟ್ಟೆಯಲ್ಲಿ ಕಲಿಯುತ್ತಿದ್ದಳು.

ನಿನ್ನೆ ಬೆಳಗ್ಗೆ ಗೇರುಕಟ್ಟೆಯಲ್ಲಿ ಬಸ್ಸಿನಿಂದ ಇಳಿದು ಶಾಲೆಗೆಂದು ತೆರಳುತ್ತಿದ್ದ ಆಸಿಫಾ ಅಲ್ಲೇ ಸಮೀಪದ ಮನೆಯೊಂದಕ್ಕೆ ತೆರಳಿ ಶೌಚಾಲಯಕ್ಕೆ ಹೋಗಿದ್ದಾಳೆನ್ನಲಾಗಿದೆ.ಆದರೆ ಈಕೆ‌ ಶಾಚಾಲಯದಿಂದ ಹೊರ ಬರದಿರುವುದನ್ನು ಗಮನಿಸಿದ ಮನೆಮಂದಿ ಸ್ಥಳೀಯ ಗ್ರಾ‌ಪಂ ಸದಸ್ಯರ ಸಹಾಯದಿಂದ
ಶೌಚಾಲಯದ ಬಾಗಿಲು ಮುರಿದು ನೋಡಿದಾಗ ವಿದ್ಯಾರ್ಥಿನಿ ನರಳಾಡುತ್ತಿರುವುದು ಕಂಡುಬಂದಿದೆ.

ಕೂಡಲೇ ಆಕೆಯನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com