ಬೆಳ್ತಂಗಡಿ;ನೀರು ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ.
ನಿನ್ನೆ ಬೆಳಿಗ್ಗೆ ಈ ಟ್ಯಾಂಕ್ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯಿತ್ ಗಮನಕ್ಕೆ
ತಂದಿದ್ದಾರೆ.
ಸಂಬಂಧಪಟ್ಟವರು ಈ ಕುರಿತು ಬಂದು ಪರಿಶೀಲಿಸಿದಾಗ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ.
ಶವ ಕೊಳೆತು ಹೋಗಿದ್ದು, ಟ್ಯಾಂಕ್ ನೀರು ಬಳಸುವ ಸಾರ್ವಜನಿಕರಲ್ಲಿ ವಾಟ್ಸಪ್ ಮೂಲಕ ಗ್ರಾಮಸ್ಥರು ಈ ನೀರು ಬಳಸಿದಂತೆ ವಿನಂತಿಸಿದ್ದಾರೆ.ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಈತನ ಮೃತದೇಹವೇ? ಎಂಬ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ.