-ಹಿಸಾಮುದ್ದೀನ್ ಶರೀಫ್ (30) ಮೃತರು.
ಭಟ್ಕಳ;ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಭಟ್ಕಳದ ಸಾಗರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಭಟ್ಕಳದ ಉಸ್ಮನಿಯ ಕಾಲನಿ ನಿವಾಸಿ ಹಿಸಾಮುದ್ದೀನ್ ಶರೀಫ್ (30) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬೈಕ್ ನ ಹಿಂಬದಿ ಸವಾರ ಮೊಹಮ್ಮದ್ ಕುತುಬ್ (20) ಗಾಯಗಳಾಗಿದೆ.ಅವರನ್ನು ಕುಂದಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಆರು ಜನ ಸ್ನೇಹಿತರು 3 ಬೈಕ್ ಗಳಲ್ಲಿ ಸಾಗರ ರಸ್ತೆಯ ಕಡೆ ತೆರಳುವಾಗ ಕುಂದಾಪುರ ನಂಬರ್ ಪ್ಲೇಟ್ ಇರುವ ಟೂರಿಸ್ಟ್ ಕಾರು ಬೈಕ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.