ಬಿಹಾರ;ಕೋವಿಡ್ ಲಾಕ್ಡೌನ್ನ ವೇಳೆ ಸಾವಿರಾರು ನೌಕರರು ನಡೆದುಕೊಂಡು ಹೋಗುತ್ತಿದ್ದ ವೇಳೆ ತನ್ನ ಕಾರ್ಮಿಕರನ್ನು ವಿಮಾನದಲ್ಲಿ ಬಿಹಾರಕ್ಕೆ ಮನೆಗೆ ಕಳುಹಿಸಿದ ರೈತರೊಬ್ಬರು ದೆಹಲಿಯ ದೇವಸ್ಥಾನವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
55 ವರ್ಷದ ʻಪಪ್ಪನ್ ಸಿಂಗ್ ಗೆಹ್ಲೋಟ್ʼ ಅವರು ತಮ್ಮ ಉದ್ಯೋಗಿಗಳಿಗೆ ತಮ್ಮ ಮನೆಗಳಿಗೆ ಮರಳಲು ವಿಮಾನ ಟಿಕೆಟ್ಗಳನ್ನು ಖರೀದಿಸಿ ದೇಶಾದ್ಯಂತ ಗಮನ ಸೆಳೆದಿದ್ದರು.
ಪೊಲೀಸರ ಪ್ರಕಾರ, ದೆಹಲಿಯ ಅಲಿಪೋರ್ ಪ್ರದೇಶದ ತನ್ನ ಮನೆಯ ಮುಂಭಾಗದಲ್ಲಿರುವ ದೇವಾಲಯದ ಸೀಲಿಂಗ್ ಫ್ಯಾನ್ಗೆ ರೈತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಗೆಹ್ಲೋಟ್ ತನ್ನ ಆತ್ಮಹತ್ಯೆಗೆ ‘ಅನಾರೋಗ್ಯ’ ಕಾರಣ ಎಂದು ಹೇಳಿರುವ ಆತ್ಮಹತ್ಯಾ ಟಿಪ್ಪಣಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಗೆಹ್ಲೂಟ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.