ಬಿಲ್ಕೀಸ್ ಬಾನು ಕೇಸ್ ಆರೋಪಿಗಳ ಬಿಡುಗಡೆ ಪ್ರಕರಣ;ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆದ ಬೆಳವಣಿಗೆಗಳೇನು?
ಹೊಸದಿಲ್ಲಿ:ಬಿಲ್ಕಿಸ್ ಬಾನು ರೇಪ್ ಮತ್ತು ಆಕೆಯ ಕುಟುಂಬದ 7 ಮಂದಿಯ ಮರ್ಡರ್ ಮಾಡಿದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ಆಲಿಸಿ ಗುಜರಾತ್ ಸರಕಾರಕ್ಕೆ ನೋಟಿಸ್ ನೀಡಿದೆ.
ಸುಪ್ರೀಂಕೋರ್ಟ್ ಸಿಜೆಐ ರಮನ ಅವರ ನೇತೃತ್ವದ ಪೀಠ ಈ ಕುರಿತ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.
ಇದೇ ವೇಳೆ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಿಡುಗಡೆ ಮಾಡುವ ವೇಳೆ ಬುದ್ಧಿಶಕ್ತಿಯನ್ನು ಬಳಸಲಾಗಿದೆಯೆ ಎಂದು ಪರಿಶೀಲಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಿಪಿಐ(ಎಂ) ಪಾಲಿಟ್ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪರಿಗಣಿಸುವುದಾಗಿ ಹೇಳಿತ್ತು. ಅದರಂತೆ ಇಂದು ವಿಚಾರಣೆ ನಡೆದಿದೆ.