ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆ, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆ, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ಕಲಬುರಗಿ:ಬಿಜೆಪಿ ಕಾರ್ಯಕರ್ತನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ನಡೆದಿದೆ.

ರಾಮು ರಾಠೋಡ್‌ (45) ಎಂಬಾತ ಮೃತರು. ಈತ ಬಿಜೆಪಿ ಕಾರ್ಯಕರ್ತನಾಗಿದ್ದು,ಸಲಗರ ಬಸಂತಪುರ ತಾಂಡಾ ನಿವಾಸಿಯಾಗಿದ್ದರು.

ಬುಧವಾರ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಜೆವರೆಗೂ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ. ಮುಂಜಾನೆ ತಾಂಡಾದ ಹೊರವಲಯದಲ್ಲಿ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ರಾಮು ಕುಟುಂಬ ಘಟನೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com