ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗುವುದು ಬಹುತೇಕ ಪಕ್ಕಾ ಎಂದೂ ಈ ಹಿಂದೆ ಹೇಳಲಾಗುತ್ತಿತ್ತು. ಆದರೆ ಇದೀಗ ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ.

ಟಾಪ್ ನ್ಯೂಸ್