ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮೇಲೆ ಎಎಸ್ ಐ ಓರ್ವರು ಗುಂಡಿನ ದಾಳಿ ನಡೆಸಿರುವ ಘಟನೆ ಜಾರ್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ.
ದಾಸ್ ಮೇಲೆ ಕಾರ್ಯಕ್ರಮಕ್ಕೆ ತೆರಳುವಾಗ ಗುಂಡು ಹಾರಿಸಲಾಗಿದೆ. ಅವರ ಎದೆಗೆ ತಗುಲಿದ್ದು ಚಿಂತಾಜನಕ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಚಿವರ ಮೇಲೆ ನಾಲ್ಕರಿಂದ ಐದು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಎಎಸ್ಐ ಗೋಪಾಲ್ ದಾಸ್ ಗುಂಡು ಹಾರಿಸಿದ್ದಾರೆ ಎಂದು ವರದಿ ತಿಳಿಸಿದೆ.ಸಚಿವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.