​ಬಸ್ ಚಾಲಕನೋರ್ವ ವಿಷಸೇವನೆ ಮಾಡಿ ಆತ್ಮಹತ್ಯೆಗೆ ಯತ್ನ; ರಾಜಕೀಯ ತಿರುವ ಪಡೆದುಕೊಳ್ಳುತ್ತಿರುವ ಪ್ರಕರಣ?

ಮಂಡ್ಯ;ಬಸ್​ ಚಾಲಕನೋರ್ವ ವಿಷಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಕೆಎಸ್​ಆರ್​​ಟಿಸಿ ಡಿಪೋದಲ್ಲಿ ನಡೆದಿದೆ.

ಅಂದೇನಹಳ್ಳಿ ಗ್ರಾಮದ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಮಂಡ್ಯದ ಕೆಎಸ್​ಆರ್​ಟಿಸಿ ಡಿಪೋ ಮುಂದೆ ಅಂದೇನಹಳ್ಳಿ ಗ್ರಾಮಸ್ಥರು ಜಮಾಯಿಸಿ ಡಿಪೋ ಗೇಟ್​ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ.

ಚಾಲಕ ಜಗದೀಶ್ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್​ಗೆ ಬೆಂಬಲ ನೀಡಿದ್ದ ಎಂಬ ಕಾರಣಕ್ಕೆ ಸಚಿವರೋರ್ವರು ವರ್ಗಾವಣೆ ಮಾಡಿಸಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದೆ.ಇದೀಗ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.

ಈ ಮಧ್ಯೆ, ಜಗದೀಶ್ ಅವರ ವರ್ಗಾವಣೆಗೆ ಬೇರೆಯೇ ಕಾರಣವಿದೆ ಎಂದು ಡಿಪೋ ಮ್ಯಾನೇಜರ್​ ಹೇಳಿದ್ದಾರೆ. ನಿರ್ವಾಹಕಿ ಜೊತೆ ಜಗದೀಶ್​ ಅನುಚಿತ ವರ್ತನೆ ತೋರಿದ್ದಾರೆ ಎಂಬ ದೂರು ಬಂದಿತ್ತು.ಈ ದೂರಿನನ್ವಯ ಮದ್ದೂರು ಡಿಪೋಗೆ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ