ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು;ಏನಿದು ಪ್ರಕರಣ?
ಬಿಬಿಎಂಪಿಯ ಅತ್ತಿಗುಪ್ಪೆ ವಾರ್ಡ್ ನ ಮಾಜಿ ಸದಸ್ಯ ದೊಡ್ಡಯ್ಯ ಅವರ ಪುತ್ರ ಗೌತಮ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿರುವ ಬಗ್ಗೆ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ದೂರು ದಾಖಲಾಗಿದೆ.
ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ‘ಗುತ್ತಿಗೆದಾರನ ಆತ್ಮಹತ್ಯೆ’ ಎಂದು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ನ ನಿಯೋಗ ದೂರು ನೀಡಿದೆ.
ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರಾಜ್ಯದ ಜನತೆಗೆ ಸುಳ್ಳು, ಅಪಪ್ರಚಾರ, ಆಧಾರ ರಹಿತ ಆರೋಪಗಳ ಮಾಡಿದ್ದಾರೆಂದು ದೂರು ನೀಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರ ನೃತೃತ್ವದ ನಿಯೋಗ ಪೊಲೀಸರಿಗೆ ದೂರು ನೀಡಿದೆ.