ಧರ್ಮಸ್ಥಳದಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಆರೋಪಿಗಳ ಬಂಧನ
ಮಂಗಳೂರು:ಧರ್ಮಸ್ಥಳದಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಟೋ ಚಾಲಕ ಮೊಹಮ್ಮದ್ ಆಶೀಕ್ ನೀಡಿದ ದೂರಿನ ಮೇರೆಗೆ ಅವಿನಾಶ್, ನಂದೀಪ್ ಹಾಗೂ ಅಕ್ಷತ್ ಎಂಬವರನ್ನು ಬಂಧಿಸಿದ್ದಾರೆ. ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಆಗಸ್ಟ್ 2 ರ ರಾತ್ರಿ ಊರಿಗೆ ತೆರಳಲು ಮೊಹಮ್ಮದ್ ಆಶೀಕ್ ಎಂಬಾತನ ಆಟೋದಲ್ಲಿ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ಈ ವೇಳೆ ಅಡ್ಡಗಡ್ಡಿದ ದುಷ್ಕರ್ಮಿಗಳು ಅನೈತಿಕ ಪೊಲೀಸ್ ಗಿರಿ ನಡೆಸಿದ್ದರು. ಘಟನೆ ಬಳಿಕ ಪೊಲೀಸ್ ಕೇಸ್ ದಾಖಲಾಗಿತ್ತು.