ಬೆಂಗಳೂರು;ಹಿಜಾಬ್, ಹಲಾಲ್ ಚುನಾವಣಾ ವಿಷಯವೇ ಅಲ್ಲ.ಈಗ ಎಲ್ಲವೂ ಮುಗಿದು ಹೊಗಿದೆ ಎಂದು ಸಿಎಂ ಬಸವರಾಜ ಬೊಮ್ಮಯಿ ಹೇಳಿಕೆ ನೀಡಿದ್ದಾರೆ.
ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೆ ಕಾಂಕ್ಲೇವ್ನಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಿಜಾಬ್, ಹಲಾಲ್ ವಿಷಯವನ್ನು ರಾಜ್ಯದ ಜನರೇ ಮರೆತಿದ್ದಾರೆ. ಕರ್ನಾಟಕದಲ್ಲಿ ಎಲ್ಲ ಸಮುದಾಯಗಳು ಸೌಹಾರ್ದತೆಯಿಂದ ಇವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯದ ನಾಡಿಮಿಡಿತವನ್ನು ಅರಿತಿದ್ದು, ಬಿಜೆಪಿ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ.ಮೂವತ್ತು ವರ್ಷದಿಂದ ರಾಜಕಾರಣದಲ್ಲಿದ್ದು, ಸಣ್ಣ-ಪುಟ್ಟ ಚುನಾವಣೆಗಳನ್ನು ಎದುರಿಸಿದ್ದೇನೆ. ಮೇ 13ಕ್ಕೆ ಎಲ್ಲರೂ ನಮಗೆ ಅಭಿನಂದನೆ ಸಲ್ಲಿಸುತ್ತಾರೆ. ಕೋವಿಡ್ ಸಂದರ್ಭದಿಂದ ಹಿಡಿದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಹೀಗಾಗಿ ನಮಗೆ ಆತ್ಮವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಇತ್ತೀಚೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಶಿಕಾರಿಪುರದಲ್ಲಿ ಟಿಪ್ಪು, ಸಾವರ್ಕರ್, ಹಿಜಾಬ್, ಹಲಾಲ್ ಇಂತಹ ವಿಷಯಗಳ ವಿವಾದಗಳನ್ನು ನಾನು ಬೆಂಬಲಿಸಲು ಹೋಗುವುದಿಲ್ಲ. ಪಕ್ಷದ ಇತರ ನಾಯಕರು ಇಂತಹ ಸಮಸ್ಯೆಗಳನ್ನು ಬೆಂಬಲಿಸಿದರೆ ಅದು ಸರಿಯಲ್ಲ ಎಂದು ಹೇಳಿದ್ದರು.ಆದರೆ ಈ ವಿಚಾರಗಳು ಚರ್ಚೆಯಲ್ಲಿರುವ ಸಂದರ್ಭದಲ್ಲಿ ಮೌನವಾಗಿದ್ದು, ಬಿಎಸ್ ವೈ ಈಗ ಬಾಯ್ಬಿಟ್ಟಿದ್ದು ಜನರಿಂದ ಟೀಕೆಗೆ ಗುರಿಯಾಗಿದ್ದರು.