ಚಿಕ್ಕಮಗಳೂರು;ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯ ಭಾವಚಿತ್ರವುಳ್ಳ ಕ್ಯಾಲೆಂಡರ್, ತಲವಾರು ಮತ್ತು ಮದ್ಯದ ಪ್ಯಾಕೇಟ್ ಗಳು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ನಲ್ಲಿ ನಡೆದಿದೆ.
ರಾತ್ರಿ ಕಾರುವೊಂದರ ಬ್ರೇಕ್ ಡೌನ್ ಆಗಿದೆ.ಈ ವೇಳೆ ಕಾರನ್ನು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.ಆ ಸಂದರ್ಭ ಕಾರಿನ ಒಳಗೆ ನೋಡಿದಾಗ ಅದರಲ್ಲಿ ಮದ್ಯದ ಪ್ಯಾಕೇಟ್ ಗಳು, ಮಾರಕಾಸ್ತ್ರ ಮತ್ತು ಸಿ.ಟಿ.ರವಿಯ ಫೋಟೋ ಇರುವ ಕ್ಯಾಲೆಂಡರ್ ಪತ್ತೆಯಾಗಿವೆ ಎಂದು ವರದಿಯಾಗಿದೆ.
ಸುದ್ದಿ ತಿಳಿದು ಎಐಟಿ ಸರ್ಕಲ್ ಬಳಿ ಜಮಾಯಿಸಿದ ಸ್ಥಳೀಯರು ಕಾರಿನಲ್ಲಿದ್ದ ಮದ್ಯ, ಕ್ಯಾಲೆಂಡರ್, ಮಾರಕಾಸ್ತ್ರವನ್ನು ಹೊರತೆಗೆದು ಸಿ.ಟಿ.ರವಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.ಓಡಿ ಹೋಗಲು ಯತ್ನಿಸಿದ ಕಾರು ಚಾಲಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಚಿಕ್ಕಮಗಳೂರು ನಗರ ಪೋಲಿಸರು ಮಧ್ಯ ಸಹಿತ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.