BIG NEWS ಎಲೆಕ್ಸನ್ ರಿಸಲ್ಟ್ ಗೆ ಮೊದಲೇ ರಾಜ್ಯದ ಜನರಿಗೆ ಕರೆಂಟ್ ಶಾಕ್; ವಿದ್ಯುತ್ ದರದಲ್ಲಿ ಹೆಚ್ಚಳ, ಪ್ರತಿ ಯುನಿಟ್ ಗೆ ಎಷ್ಟು ದರ ಹೆಚ್ಚಳವಾಗಿದೆ ಗೊತ್ತಾ?

ಬೆಂಗಳೂರು;ಎಲೆಕ್ಸನ್ ರಿಸಲ್ಟ್ ಗೆ ಮೊದಲೇ ರಾಜ್ಯದ ಜನರಿಗೆ ಕರೆಂಟ್ ಶಾಕ್ ಉಂಟಾಗಿದ್ದು, ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 70 ಪೈಸೆ ಏರಿಕೆ ಮಾಡಲಾಗಿದೆ.

ಪ್ರತಿ ಯೂನಿಟ್ ವಿದ್ಯುತ್‌‌ ದರ 140 ಪೈಸೆ ಏರಿಕೆಗೆ ಎಸ್ಕಾಂ ಸಂಸ್ಥೆ ಮನವಿ ಮಾಡಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯುನಿಟ್ ವಿದ್ಯುತ್ ಗೆ 70 ಪೈಸೆ ಏರಿಕೆಗೆ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಏಪ್ರಿಲ್ 1, 2023ರಿಂದ ಅನ್ವಯ ಆಗುವಂತೆ ನೂತನ ದರ ಏರಿಕೆ ಮಾಡುವುದಾಗಿ KERC ಹೇಳಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 200 ಯುನಿಟ್ ವಿದ್ಯುತ್ ಉಚಿತ ಭರವಸೆ ನೀಡಿತ್ತು.ಜನರು ಸಂತಸದಲ್ಲಿದ್ದರು.ಇದೀಗ ರಿಸಲ್ಟ್ ಗೆ ಮೊದಲೇ ವಿದ್ಯುತ್ ದರದಲ್ಲಿ ಏರಿಕೆ ಕಂಡಿದ್ದು, ಜನರ ಜೇಬಿಗೆ ಕತ್ತರಿ ಬಿದ್ದಿದೆ.

ನಾಳೆ ಮತ ಎಣಿಕೆ;ಎಲ್ಲೆಡೆ ಕಟ್ಟೆಚ್ಚರ

ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಮತ ಎಣಿಕಾ ಕಾರ್ಯವು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು,  ಕಾನೂನು ಸುವ್ಯವಸ್ಥೆ ಕಾಪಾಡಲು  ಕ್ರಮವಹಿಸಲಾಗಿದೆ.

ರಾಜ್ಯದ 58,545 ಮತಗಟ್ಟೆಗಳಲ್ಲಿನ ಮತದಾರರು ಅಖಾಡದಲ್ಲಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.

ಮತದಾನ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಅವರ ಕರ್ತವ್ಯಕ್ಕೆ ಅನುಗುಣವಾಗಿ ಪ್ರವೇಶ ಪತ್ರ ಅಥವಾ ಗುರುತಿನ ಚೀಟಿಗಳನ್ನು ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ನೀಡಿರುತ್ತಾರೆ.

ನಿಯೋಜಿತಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ತಮಗೆ ನೀಡಿರುವ ಪಾಸ್‍ಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ಭದ್ರತಾ ಸಿಬ್ಬಂದಿಗಳು ಕೇಳಿದಾಗ ತಕ್ಷಣ ತೋರಿಸಬೇಕು. ಅನಾವಶ್ಯಕ ಗೊಂದಲ, ವಾದಗಳಿಗೆ ಅವಕಾಶವಿರುವುದಿಲ್ಲ. ಹಾಗೂ ಮತ ಎಣಿಕಾ ಕೇಂದ್ರಕ್ಕೆ ಬರುವವರು ನೀರಿನ ಬಾಟಲ್, ಮೊಬೈಲ್, ಕಡ್ಡಿಪೆಟ್ಟಿಗೆ, ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಳಗಡೆ ತರದಂತೆ ನಿಷೇಧಿಸಲಾಗಿದೆ.ಪ್ರತಿಯೊಬ್ಬರು ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪಾಲಿಸಬೇಕಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com