ಅಶ್ವತ್ ನಾರಾಯಣ್, ಹರೀಶ್ ಪೂಂಜಾ ವಿರುದ್ದ ಕೇಸ್ ದಾಖಲು; ಈ ಬಗ್ಗೆ ನೂತನ ಡಿಜಿಪಿ ಹೇಳಿದ್ದೇನು ಗೊತ್ತಾ?

ಬೆಂಗಳೂರು:ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಹೇಳಿದ್ದ ಸಿಎನ್ ಅಶ್ವತ್ಥನಾರಾಯಣ ಹಾಗೂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂದ ಹರೀಶ್ ಪೂಂಜಾ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನೂತನ ಡಿಜಿಪಿ ಅಲೋಕ್ ಮೋಹನ್, ಈ ಬಗ್ಗೆ ಕ್ರಮ ಆಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಡಿಜಿಪಿ ಮಾತನಾಡಿ,ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ. ಈ ಬಗ್ಗೆ ಕ್ರಮ ಆಗುತ್ತೆ.ಮುಂದೆ ಎಲ್ಲಾ ಕೆಲಸ ಅಗುತ್ತೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಡಿಜಿ ಅಲೋಕ್ ಮೋಹನ್, ರೌಡಿಸಂ ಅನ್ನೊದು ಜೀರೋ ಆಗಬೇಕು.ಡ್ರಗ್ಸ್ ವಿರುದ್ಧ ಕ್ರಮ ಆಗಬೇಕು.ಬೆಂಗಳೂರು ಡ್ರಗ್ಸ್ ರಹಿತ ಸಿಟಿ ಆಗಬೇಕು. ಪೊಲೀಸರು ಒಳ್ಳೆಯ ರೀತಿಯಲ್ಲಿ ಸಾರ್ವಜನಿಕರ ಜೊತೆಗೆ ವರ್ತನೆ ಮಾಡಬೇಕು.ಜನ ಸ್ನೇಹಿ ಪೊಲೀಸ್ ಕೆಲಸ ಮಾಡಬೇಕು.ಸಾರ್ವಜನಿಕರ ದೂರುಗಳನ್ನು ಪಡೆದು ಪ್ರಕರಣ ದಾಖಲು ಮಾಡಬೇಕು ಎಂದು ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಶೇಕಡಾ 100 ರಷ್ಟು ನಿಯಂತ್ರಣದಲ್ಲಿ ಇರಬೇಕು.ಸಮಾಜದಲ್ಲಿ ಯಾವ ಕಾರಣಕ್ಕೂ ಅಶಾಂತಿ ನೆಲಸಲು ಬಿಡಬಾರದು ಎಂದು ನೂತನ ಡಿಜಿಪಿ ಇತರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com