ಮಂಗಳೂರು: ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣದಲ್ಲಿ ಶಾಸಕ ಈಶ್ವರಪ್ಪ ಅಝಾನ್ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಕಾವೂರಿನಲ್ಲಿ ಈಶ್ವರಪ್ಪ ಭಾಷಣ ಮಾಡುವ ಮಧ್ಯೆ ಆರಂಭವಾದ ಆಝಾನ್ಗೆ ಮಾಜಿ ಸಚಿವ ಈಶ್ವರಪ್ಪ ಎಲ್ಲಿ ಹೋದರೂ ನನಗೆ ಇದೊಂದು ತಲೆನೋವು.ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ.ಇದರಲ್ಲೇನು ಅನುಮಾನ ಬೇಡ.ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ.ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ.ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ.ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅಂತಾ ಹೇಳಬೇಕಾಗುತ್ತದೆ ಎಂದು ಈಶ್ವರಪ್ಪ ನಾಲಗೆ ಹರಿಯಬಿಟ್ಟಿದ್ದಾರೆ.