ಕೇರಳ;ಹಲ್ವಾ ತಿನ್ನುವಾಗ ಶ್ವಾಸನಾಳದಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವು

ಕೇರಳ;ಹಲ್ವಾ ತಿನ್ನುವಾಗ ಶ್ವಾಸನಾಳದಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವು




ಕೊಚ್ಚಿ:ಹಲ್ವಾ ತಿನ್ನುವಾಗ ಶ್ವಾಸನಾಳದಲ್ಲಿ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದಿಂದ ವರದಿಯಾಗಿದೆ.

ನಿಜಾರ್​(49) ಮೃತಪಟ್ಟ ವ್ಯಕ್ತಿ.ಈತ ಕೇರಳದ ಥಾಮರಾ ಮುಕ್ಕುವಿನ ಚೆರುಪುಲ್ಲಿ ಪರಂಬುವಿನ ನಿವಾಸಿ.ಹಲ್ವಾ ಶ್ವಾಸನಾಳದಲ್ಲಿ ಸಿಲುಕಿಕೊಂಡು ನಿಜಾರ್ ಮನೆಯಲ್ಲೇ​ ದುರಂತ ಸಾವಿಗೀಡಾಗಿದ್ದಾರೆ.ಈ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.



ನಿಜಾರ್ ಕಾರ್ಮಿಕನಾಗಿದ್ದ.ಬುಧವಾರ ಬೆಳಗ್ಗೆ ಆತ ಬೇಕರಿಯಲ್ಲಿ ಹಲ್ವಾ ಕೊಂಡು ತಂದು ಸೇವಿಸಿದ್ದ.ಬಳಿಕ ದೇಹದಲ್ಲಿ ಕೊಂಚ ಇರುಸುಮುರುಸು ಉಂಟಾಗಿ, ಕುಸಿದುಬಿದ್ದಿದ್ದ.ತಕ್ಷಣ ಆತನನ್ನು ಸ್ಥಳೀಯರು ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ​




ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಮಂಜಾಳಿ ಜುಮಾ ಮಸೀದಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.ಶ್ವಾಸನಾಳದಲ್ಲಿ ಹಲ್ವಾ ಸಿಲುಕಿ ಮೃತಪಟ್ಟಿದ್ದಾರೆಂದು ಮರಣೋತ್ತರ ವರದಿಯಲ್ಲಿ ತಿಳಿದುಬಂದಿದೆ.ನಜಾರ್​ ಅವರು ತಮ್ಮ ಪತ್ನಿ ರಮ್ಲಾ ಮತ್ತು ಮಕ್ಕಳಾದ ನಿಲೋಫರ್ ಮತ್ತು ಜೆನ್ನಿಫರ್ ಅವರನ್ನು ಅಗಲಿದ್ದಾರೆ.







ಟಾಪ್ ನ್ಯೂಸ್