ದಲಿತ ಎಂಬ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಹಿರಿಯ ಐಎಎಸ್ ಅಧಿಕಾರಿ

ದಲಿತ ಎಂಬ ಕಾರಣಕ್ಕೆ ನನಗೆ ತಾರತಮ್ಯ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಜಮ್ಮು- ಕಾಶ್ಮೀರದ ಹಿರಿಯ ಐಎಎಸ್ ಅಧಿಕಾರಿಯೋರ್ವರು ಕೇಂದ್ರಾಡಳಿತ ಪ್ರದೇಶದ ಆಡಳಿತದ ವಿರುದ್ಧ ಆರೋಪವನ್ನು ಮಾಡಿದ್ದಾರೆ.

ಐಎಎಸ್ ಅಧಿಕಾರಿ ಅಶೋಕ್ ಪರ್ಮಾರ್ ಅವರು 1992ರ ಬ್ಯಾಚ್ ನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದಾರೆ.

ಇವರು ಜಮ್ಮು ಕಾಶ್ಮೀರದಲ್ಲಿ ಕೆಲಸ ಮಾಡುತ್ತಿದ್ದು, ಕಳೆದ 1 ವರ್ಷದಲ್ಲಿ 5 ಬಾರಿ ವರ್ಗಾವಣೆ ಮಾಡಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಜಮ್ಮು-ಕಾಶ್ಮೀರದ ಆಡಳಿತ ಕಿರುಕುಳ ಮತ್ತು ಬೆದರಿಕೆಯನ್ನು ಹಾಕುತ್ತಿದೆ ಎಂದು ಐಎಎಸ್ ಅಧಿಕಾರಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ದೂರು ದಾಖಲಿಸಿದ್ದಾರೆ.

ಈ ಕುರಿತು ಕೇಂದ್ರ ಗೃಹ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪರ್ಮಾರ್ ಅವರನ್ನು ಎರಡು ಉನ್ನತ ಮಟ್ಟದ ಸಭೆಗಳಿಂದ ಹೊರಹಾಕಲಾಯಿತು ಮತ್ತು ಇತರ ಅಧಿಕಾರಿಗಳ ಮುಂದೆ ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ