ಬೆಳ್ಳಂಬೆಳಿಗ್ಗೆ ನಮಾಝ್ ಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ, ಬಾಲಕನ ಸ್ಥಿತಿ ಗಂಭೀರ

ಬೆಳ್ಳಂಬೆಳಿಗ್ಗೆ ನಮಾಝ್ ಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ, ಬಾಲಕನ ಸ್ಥಿತಿ ಗಂಭೀರ

ಕೋಲಾರ;ಬಾಲಕನೊಬ್ಬ ನಮಾಜ್‌ಗೆ ಹೋಗುವಾಗ ಬೀದಿ ನಾಯಿಗಳು ಗುಂಪು ಸೇರಿಕೊಂಡು ದಾಳಿ ಮಾಡಿ ಕಚ್ಚಿ ಎಳೆದಿರುವ ದುರ್ಘಟನೆ ಕೋಲಾರ ನಗರದಲ್ಲಿ ಬೆಳಗಿನ ಜಾವ ನಡೆದಿದೆ.

ಕೋಲಾರದ ರಹಮತ್ ನಗರದ 9 ವರ್ಷದ ಬಾಲಕ ಜಾಫರ್ ರಂಜಾನ್ ಕೊನೆಯ ದಿನದ ಜಾಗರಣೆಯನ್ನು ಮಸೀದಿಯಲ್ಲಿ ಮುಗಿಸಿದ್ದ.ಮನೆಗೆ ಬಂದು ಮತ್ತೆ ಪ್ರಾರ್ಥನೆಗಾಗಿ ಮಸೀದಿಗೆ ತೆರಳುತ್ತಿದ್ದ. ಈ ವೇಳೆ ನಾಯಿಗಳು ಬಾಲಕನ ಮೇಲೆ ದಿಢೀರ್​​ ದಾಳಿ ಮಾಡಿವೆ.

ನಾಯಿಗಳಿಂದ ಬಿಡಿಸಿಕೊಳ್ಳಲಾಗದೆ ಪ್ರಾಣವೇ ಕಳೆದುಕೊಳ್ಳುವ ಪರಿಸ್ಥಿತಿಯಲ್ಲಿ ಬಾಲಕ‌ ಪರದಾಡುತ್ತಿದ್ದಂತಹ ಸಂದರ್ಭದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಬಾಲಕನ ಚಿರಾಟ ಕಂಡು ಕೂಡಲೇ ರಕ್ಷಣೆಗೆ ದಾವಿಸಿದ್ದಾರೆ.

ನಾಯಿಗಳಿಂದ‌ ಬಾಲಕನನ್ನು ರಕ್ಷಣೆ ಮಾಡಿ ಕೂಡಲೇ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೀದಿನಾಯಿಗಳು ಪುಟ್ಟ ಬಾಲಕ ಜಾಫರ್ ಮೇಲೆ ದಾಳಿ ಮಾಡಿ ಮೈ ಎಲ್ಲಾ ಕಚ್ಚಿ ಗಾಯಗೊಳಿಸಿದೆ.ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಜನರು ಸ್ಥಳೀಯಾಡಳಿತದ ವಿರುದ್ದ ಆಕ್ರೋಶವನ್ನು ಹೊರ ಹಾಕಿದ್ದಾರೆ.ಇತ್ತೀಚಿನ ದಿನಗಳಲ್ಲಿ‌ ನಾಯಿಗಳ ದಾಳಿಗಳು ಹೆಚ್ಚಾಗುತ್ತಿದ್ದು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com