ಎದೆನೋವಿನಿಂದ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ ವ್ಯಕ್ತಿ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಜೀವಂತವಾದ!; ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವರ ಅಚ್ಚರಿ ಸುದ್ದಿ

ಚಾಮರಾಜನಗರ:ಎದೆನೋವಿನಿಂದ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ ವ್ಯಕ್ತಿ ದಿಡೀರ್ ಜೀವಂತನಾದ ಘಟನೆ ರಾಜ್ಯದಲ್ಲಿ ನಡೆದಿದೆ‌.

ಹನೂರಿನ ವಿವೇಕಾನಂದ ಶಾಲೆಯಲ್ಲಿ ಚುನಾವಣೆ ತರಬೇತಿಯಲ್ಲಿದ್ದ ನೌಕರ ಜಗದೀಶ್‌ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದರು. ವಿಷಯ ತಿಳಿದು ಮೃತನ ಕುಟುಂಬಸ್ಥರ ಆಕ್ರಂದನವೂ ಮುಗಿಲು ಮುಟ್ಟಿತ್ತು.

ಇನ್ನೇನು ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಅಂದುಕೊಂಡಿದ್ದಾಗ ಮೃತ ವ್ಯಕ್ತಿಗೆ ಜೀವ ಇರುವುದು ಕಂಡು ಬಂದಿದೆ.

ಹನೂರಿನ ಖಜಾನೆ ಇಲಾಖೆಯಲ್ಲಿ ಜಗದೀಶ್ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ವಿಧಾನಸಭೆ ಚುನಾವಣೆ ನಿಮಿತ್ತ ಅವರನ್ನು ಚುನಾವಣಾ ಕರ್ತವ್ಯಕ್ಕೆ ಹಾಕಲಾಗಿತ್ತು.ಈ ಹಿನ್ನೆಲೆಯಲ್ಲಿ ವಿವೇಕಾನಂದ ಶಾಲೆಯಲ್ಲಿ ಚುನಾವಣಾ ತರಬೇತಿ ನಡೆಯುತ್ತಿತ್ತು.ಈ ವೇಳೆ ಜಗದೀಶ್‌ ಎದೆನೋವಿನಿಂದ ಕುಸಿದು ಬಿದ್ದಿದ್ದರು.

ಕೂಡಲೇ ಅಲ್ಲಿದ್ದವರು ಅವರನ್ನು ಕಾಮಗೆರೆ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಜಗದೀಶ್‌ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ಪರೀಕ್ಷಿಸಿದ ವೈದ್ಯರು ಘೋಷಿಸಿದ್ದರು.

ಜಗದೀಶ್ ಮೃತಪಟ್ಟಿದ್ದಾರೆಂದು ತಿಳಿದು ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿತ್ತು.ಇನ್ನೇನು ಮರಣೋತ್ತರ ಪರೀಕ್ಷೆಗಾಗಿ ಕೊಠಡಿಗೆ ತೆಗೆದುಕೊಂಡು ಹೋಗಬೇಕಿತ್ತು. ಆಗಲೇ ನೋಡಿ ಜಗದೀಶ್ ಕೈ-ಕಾಲು ಆಡಿಸಿದ್ದಾರೆ. ಇದನ್ನೂ ಸಾರ್ವಜನಿಕರು ಗಮನಿಸಿದ್ದು, ಕೂಡಲೇ ವೈದ್ಯರಿಗೆ ತಿಳಿಸಿದ್ದಾರೆ.

ವೈದ್ಯರು ಪರೀಕ್ಷೆ ನಡೆಸಿದಾಗ ಜಗದೀಶ್‌ ಉಸಿರಾಡುತ್ತಿರುವುದು ಗಮನಿಸಿದ್ದಾರೆ. ಹೃದಯದ ಬಡಿತ ನಿಂತೇ ಹೋಯಿತು ಎಂದುಕೊಂಡವರಿಗೆ ಅಚ್ಚರಿಯಾಗಿ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಗದೀಶ್‌ ಅವರನ್ನು ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com