ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಥಳಿತ; ಮತ್ತೊಂದು ಅಮಾನವೀಯ ಘಟನೆ ವರದಿ

ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಥಳಿತ; ಮತ್ತೊಂದು ಅಮಾನವೀಯ ಘಟನೆ ವರದಿ




ಜಾರ್ಖಂಡ್;ಮಹಿಳೆಯನ್ನು ಥಳಿಸಿರುವ ಪ್ರಕರಣ ಗಿರಿದಿಹ್ನ ಸರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಮಹಿಳೆಯನ್ನು ದುಷ್ಕರ್ಮಿಗಳು ಮೊದಲು ವಿವಸ್ತ್ರಗೊಳಿಸಿ ತೀವ್ರವಾಗಿ ಥಳಿಸಿ ಇಡೀ ರಾತ್ರಿ ಕಾಡಿನ ಮರಕ್ಕೆ ಕಟ್ಟಿ ಹಾಕಿದ್ದರು ಎಂದು ವರದಿಯಾಗಿದೆ.

ಪ್ರಕರಣದಲ್ಲಿ ಇಬ್ಬರು ಮಹಿಳಾ ಆರೋಪಿಗಳು ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಕಾಸ್ ಕುಮಾರ್ ಸೋನಾರ್, ಶ್ರವಣ್ ಸೋನಾರ್, ರೇಖಾ ದೇವಿ ಮತ್ತು ಮುನ್ನಿದೇವಿ ಎಂದು ಗುರುತಿಸಲಾಗಿದೆ.

ಮಹಿಳೆಯನ್ನು ಪೊಲೀಸರು ಒತ್ತೆಯಾಳುಗಳಿಂದ ಮುಕ್ತಗೊಳಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಬುಧವಾರ ರಾತ್ರಿ 10:30ರ ಸುಮಾರಿಗೆ ವ್ಯಕ್ತಿಯೊಬ್ಬ ತನಗೆ ಕರೆ ಮಾಡಿ ಮನೆಯಿಂದ ಹೊರಗೆ ಬರುವಂತೆ ಹೇಳಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಅವಳು ಹೊರಗೆ ಬಂದಾಗ ಅಲ್ಲಿ ಇಬ್ಬರು ನಿಂತಿದ್ದರು.

ಆಕೆಗೆ ತನ್ನ ಬೈಕಿನಲ್ಲಿ ಕೂರಿಸಿಕೊಂಡು ಒಂದು ಕಿಲೋಮೀಟರ್ ದೂರ ಕರೆದುಕೊಂಡು ಹೋಗಿ ಥಳಿಸಿ ಬಟ್ಟೆ ಬಿಚ್ಚಿದರು ಎಂದು ಮಹಿಳೆ ಆರೋಪಿಸಿದ್ದಾರೆ.ಬಳಿಕ ಮರಕ್ಕೆ ಕಟ್ಟಿ ಹಾಕಲಾಗಿತ್ತು ಮಹಿಳೆಯು ಅರೆಬೆತ್ತಲೆ ಸ್ಥಿತಿಯಲ್ಲಿ ಇಡೀ ರಾತ್ರಿ ಆ ಮರಕ್ಕೆ ಕಟ್ಟಲ್ಪಟ್ಟಿದ್ದಳು.

ಬೆಳಗ್ಗೆ ಗ್ರಾಮಸ್ಥರ ಮಾಹಿತಿ ಮೇರೆಗೆ ಪೊಲೀಸರು ಬಂದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಸಂತ್ರಸ್ತ ಮಹಿಳೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸರಿಯಾ-ಬಗೋದರ್ ಎಸ್ಡಿಪಿಒ ನೌಶಾದ್ ಆಲಂ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ನವೀನ್ ಕುಮಾರ್ ಸಿಂಗ್, ಸರಿಯಾ ಪೊಲೀಸ್ ಠಾಣೆ ಪ್ರಭಾರಿ ಮತ್ತು ಇತರ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.




ಟಾಪ್ ನ್ಯೂಸ್