ಕಡಬ;ಉದ್ಯಮಿಯೋರ್ವರು ಸೇತುವೆ ಮೇಲೆ ಕಾರು ನಿಲ್ಲಿಸಿ
ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಆಲಂಕಾರಿನ ದುರ್ಗಾಂಬಾ ಜನರಲ್ ಸ್ಟೋರ್ ನ ಮಾಲಕ ಚಂದ್ರಶೇಖರ ಪೂಜಾರಿ ಎಂದು ಗುರುತಿಸಲಾಗಿದೆ.ಇವರು ಮೂರ್ತೆದಾರದ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
ಇಂದು ಮುಂಜಾನೆ ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮುಂಜಾನೆ ಐದು ಗಂಟೆಯ ವೇಳೆ ಸೇತುವೆಯಿಂದ ನದಿಗೆ ಹರಿದ್ದಾರೆ ಎಂದು ಅಂದಾಜಿಸಲಾಗಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.