ಪಾಲೆಸ್ತೀ‌ನ್ ವಿರೋಧಿ ಸ್ಟೇಟಸ್; ಬಹರೈನ್ ನಲ್ಲಿ ಉದ್ಯೋಗ ಕಳೆದುಕೊಂಡ ಕರ್ನಾಟಕ ಮೂಲದ ವೈದ್ಯ

ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನ ನಡುವಿನ ಯುದ್ಧದ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್ ಹಾಕಿದ
ಕರ್ನಾಟಕ ಮೂಲದ ವೈದ್ಯರೊಬ್ಬರನ್ನು ಬಹರೈನ್ ನಲ್ಲಿ ಉದ್ಯೋಗದಿಂದ ವಜಾಗೊಳಿಸಿರುವ ಬಗ್ಗೆ ವರದಿಯಾಗಿದೆ.

ಡಾ.ಸುನೀಲ್ ಜೆ.ರಾವ್ ಉದ್ಯೋಗ ಕಳೆದುಕೊಂಡ ವೈದ್ಯರಾಗಿದ್ದಾರೆ.

ಇವರು ಬಹರೈನ್ ನ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ಯಾಲೆಸ್ತೀನಿಯರ ವಿರುದ್ಧ ಎಕ್ಸ್ ನಲ್ಲಿ ಸ್ಟೇಟಸ್ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಸ್ಟೇಟಸ್​ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದರು.

ನನ್ನ ಮಾತು ಮತ್ತು ಕಾರ್ಯಗಳಿಗಾಗಿ ನಾನು ತೀವ್ರವಾಗಿ ವಿಷಾದಿಸುತ್ತೇನೆ. ಪೋಸ್ಟ್ ಮಾಡಿದ ಹೇಳಿಕೆಗಾಗಿ ಕ್ಷಮೆಯಾಚಿಸಲು ಬಯಸುತ್ತೇನೆ. ಪ್ರಸ್ತುತ ಘಟನೆಯ ಸಂದರ್ಭದಲ್ಲಿ ಇದು ಸಂವೇದನಾರಹಿತವಾಗಿತ್ತು. ವೈದ್ಯನಾಗಿ ಎಲ್ಲ ಜೀವಗಳು ಮುಖ್ಯವೆಂದು ಹೇಳುತ್ತೇನೆ ಎಂದು ಡಾ.ಸುನೀಲ್ ಕ್ಷಮೆ ಯಾಚಿಸಿದ್ದರು.

ನಾನು ಕಳೆದ 10 ವರ್ಷಗಳಿಂದ ಇಲ್ಲಿದ್ದು, ಈ ದೇಶ, ದೇಶದ ಜನರು ಮತ್ತು ಧರ್ಮವನ್ನು ಗೌರವಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಆದರೆ ಸಮಾಜಕ್ಕೆ ಅಹಿತವಾದ ಸ್ಟೇಟಸ್ ಹಾಕಿರುವುದರಿಂದ ತಕ್ಷಣವೇ ಜಾರಿಗೆ ಬರುವಂತೆ ಅವರನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ ಎಂದು ದ ರಾಯಲ್ ಬಹರೈನ್ ಆಸ್ಪತ್ರೆ ತಿಳಿಸಿದೆ‌.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು