ಉಡುಪಿ:ಕಾಪು ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಗಂಭೀರವಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಚ್ಚಿಲ ನಿವಾಸಿ ರಿತೇಶ್(24) ಮೃತ ಯುವಕ. ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ
ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿದ್ದ ಬೈಕ್ ಸವಾರ ರಿತೇಶ್ ಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ರಿತೇಶ್ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.