ಬೆಳ್ಳಾರೆ:ತಂದೆ-ಮಗನ ನಡೆದ ಹೊಡೆದಾಟದಲ್ಲಿ ಗಾಯಗೊಂಡಿದ್ದ ತಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.
ಕುಕ್ಕುಜಡ್ಕದಲ್ಲಿ ಕಳೆದವಾರ ಕಿಟ್ಟು ಹಾಗೂ ಮಗ ಹರ್ಷಿತ್ ಹೊಡೆದಾಟ ನಡೆಸಿಕೊಂಡಿದ್ದರು.ಹರ್ಷಿತ್ ಕಿಟ್ಟುರವರ ಮೊದಲನೆ ಹೆಂಡತಿಯ ಮಗನಾಗಿದ್ದ.
ಹರ್ಷಿತ್ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದ. ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.