SKSSF ಕಾರ್ಯಕರ್ತ ಸಿರಾಜ್ ಮೃತ್ಯು
ಉಪ್ಪಿನಂಗಡಿ; ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕೊಕ್ಕಡ ಸೌತಡ್ಕ ನಿವಾಸಿ ಸಿರಾಜ್ ಮೃತರು. ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಿರಾಜ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು.
ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಿರಾಜ್ ಎಸ್ ಕೆ ಎಸ್ ಎಸ್ ಎಫ್ ಕಾರ್ಯಕರ್ತರಾಗಿದ್ದು, ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದರು.