ಬೆಳಗಾವಿ:ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ, ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿಯಾಗಿ ಬಿದ್ದ ಬಗ್ಗೆ ವರದಿಯಾಗಿದೆ.
ಎದುರಿಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಘಟಪ್ರಭಾ ಎಡದಂಡೆ ಕಾಲುವೆಗೆ ಉರುಳಿದೆ.
ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಅವರಿಗೆ ಗಾಯಗಳಾಗಿದ್ದು ರಾಯಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ರಾಜ್ಯ ಹೆದ್ದಾರಿ 31ರಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.