ರಾಜ್ಯದ ಮದರಸಾಗಳಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

ರಾಜ್ಯದ ಮದರಸಾಗಳಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ




ಬೆಂಗಳೂರು;ಮದರಸಾಗಳ ನಿರ್ವಹಣೆಗೆ ಪ್ರತ್ಯೇಕ‌ ಮಂಡಳಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಮೂಲಕ ಮದರಸಾಗಳಿಗೆ ರಾಜ್ಯದಲ್ಲಿರುವ ನೊಂದಾಯಿತ 966 ಮದರಾಸಗಳನ್ನು ಈ ಮಂಡಳಿ ವ್ಯಾಪ್ತಿಗೆ ತರಲು ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.ನೊಂದಾಯಿಸಿಕೊಳ್ಳದ ಮದರಸಾಗಳಿಗೂ ನೊಂದಣಿ ಕಡ್ಡಾಯಗೊಳಿಸಲಾಗುವುದು ಎಂದು ತಿಳಿದುಬಂದಿದೆ.




ಇಸ್ಲಾಂ ಧಾರ್ಮಿಕ ಶಿಕ್ಷಣದ ಜೊತೆಗೆ ಔಪಚಾರಿಕ ಶಿಕ್ಷಣ ನೀಡಲು ಯೋಜನೆ ಹಮ್ಮಿಕೊಂಡಿದ್ದು,ನಿತ್ಯ ರಾಷ್ಟ್ರಗೀತೆ ಹಾಡಿಸುವುದನ್ನು ಈ ಮಂಡಳಿಯು ಮದರಸಾಗಳಲ್ಲಿ ಜಾರಿಗೆ ತರಲಿದೆ‌‌ ಎನ್ನಲಾಗಿದೆ.

ಪ್ರತಿ ಮದರಸಾಗಳಲ್ಲಿ ಹಿಫ್ಲ್ (ಕುರಾನ್ ಕಂಠ ಪಟಣ) ಪಾಠ,ಮದರಸಾಗಳಲ್ಲಿನ ಮೂಲ ಸೌಕರ್ಯ,ಕಟ್ಟಡ ಅಭಿವೃದ್ದಿಗೂ ಮಂಡಳಿ ಮೂಲಕ ಕ್ರಮ ಕೈಗೊಳ್ಳಲಿದ್ದು ಸಿದ್ದರಾಮಯ್ಯ ಅವಧಿಯಲ್ಲಿ ಮಂಜೂರಾಗಿರುವ 50 ಕೋಟಿ ರೂಪಾಯಿಯನ್ನು ಬಳಸಲು ಅನುಮತಿ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






ಟಾಪ್ ನ್ಯೂಸ್