ತಮಿಳುನಾಡಿನಲ್ಲಿ ಭೀಕರ ಅಪಘಾತ; ಮಂಗಳೂರಿನ ಯುವಕ ಮೃತ್ಯು
ಮಂಗಳೂರು:ತಮಿಳುನಾಡಿನಲ್ಲಿ ನಡೆದ ಲಾರಿ ಅಪಘಾತದಲ್ಲಿ ಬಿ.ಸಿರೋಡಿನ ಯುವಕ ಮೃತಪಟ್ಟ ಘಟನೆ ನಡೆದಿದೆ.
ಇರ್ಷಾದ್(36)ಮೃತ ಯುವಕ.ತಮಿಳುನಾಡಿನ ಆಂಬೂರು ಎಂಬಲ್ಲಿ ಮಂಗಳೂರಿನ ಧಕ್ಕೆಯಿಂದ ಚೆನ್ನೈ ಮಾರುಕಟ್ಟೆಗೆ ಮೀನು ಸಾಗಿಸುತ್ತಿದ್ದ ಲಾರಿ ನಿಲ್ಲಿಸಿದ್ದ ವಾಹನವೊಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಇರ್ಷಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಮೃತ ಇರ್ಷಾದ್ ಪತ್ನಿ,ತಾಯಿ,ಇಬ್ಬರು ಮಕ್ಕಳನ್ನು ಅಗಲಿದ್ದಾರೆ.